ಮೈಸೂರು ನಗರ

ಸಂಪುಟ ಸಭೆಯನ್ನು ಮಹದೇಶ್ವರ ಬೆಟ್ಟದ ಬದಲು ಚಾ.ನಗರದಲ್ಲೇ ನಡೆಸಬೇಕಿತ್ತು: ವಾಟಾಳ್‌ ನಾಗರಾಜ್‌

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ ಇಡೋದು, ದೇವಾಲಯಕ್ಕೆ ಹೋಗೋದು ಜಾಸ್ತಿಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ ಅಭಿವೃದ್ಧಿಗೆ ವಿಶೇಷ ಘೋಷಣೆ ಕೊಡಬೇಕಿತ್ತು. ಈಗಿನ ಘೋಷಣೆ ಕಾರ್ಯಕ್ರಮಗಳು ನಾನು ಶಾಸಕನಾಗಿದ್ದಾಗಲೇ ಮಾಡಿದ್ದು. ಕ್ರೀಡಾಂಗಣ, ಜಿಲ್ಲಾಡಳಿತ ಭವನ, ನವ ಜಿಲ್ಲೆ ನಿರ್ಮಾಣ, ಕಾವೇರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ತಂದಿದ್ದು ನಾನು. ಈಗ ನನ್ನನ್ನೇ ಕಡೆಗಣಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಕರು ಮತ್ತು ಪದವೀಧರರು ಮತಹಾಕಲು ಹಣ ಪಡೆಯುತ್ತಿದ್ದಾರೆ. ಇದಕ್ಕೆ ಕಳೆದ ಶಿಕ್ಷಕರ ಮತ್ತು ಪದವೀಧರ ಚುನಾವಣೆಯೇ ಸಾಕ್ಷಿ. ಇದು ಬೇಸರದ ಸಂಗತಿ. ಆ ಚುನಾವಣೆಯಲ್ಲಿ ನಾನೂ ಸ್ಪರ್ಧಿಸಿದ್ದೆ. ಒಂದು ವೋಟಿಗೆ 9 ಸಾವಿರ ಕೊಟ್ಟ ವಿವೇಕಾನಂದ ಶಿಕ್ಷಕರ ವೋಟ್ ಪಡೆದಿದ್ದಾನೆ. ಇವತ್ತಿನ ಪರಿಸ್ಥಿತಿಯಲ್ಲಿ ಒಂದು ಎಂಎಲ್‌ಸಿ ಸ್ಥಾನ ಗೆಲ್ಲಲು ಸುಮಾರು 25 ಕೋಟಿ ಬೇಕು. ಈಗಿನ ವ್ಯವಸ್ಥೆ ಎಲ್ಲಾ ಹಾಳಾಗಿ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago