ಮೈಸೂರು ನಗರ

ಸಂಪುಟ ಸಭೆಯನ್ನು ಮಹದೇಶ್ವರ ಬೆಟ್ಟದ ಬದಲು ಚಾ.ನಗರದಲ್ಲೇ ನಡೆಸಬೇಕಿತ್ತು: ವಾಟಾಳ್‌ ನಾಗರಾಜ್‌

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ ಇಡೋದು, ದೇವಾಲಯಕ್ಕೆ ಹೋಗೋದು ಜಾಸ್ತಿಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ ಅಭಿವೃದ್ಧಿಗೆ ವಿಶೇಷ ಘೋಷಣೆ ಕೊಡಬೇಕಿತ್ತು. ಈಗಿನ ಘೋಷಣೆ ಕಾರ್ಯಕ್ರಮಗಳು ನಾನು ಶಾಸಕನಾಗಿದ್ದಾಗಲೇ ಮಾಡಿದ್ದು. ಕ್ರೀಡಾಂಗಣ, ಜಿಲ್ಲಾಡಳಿತ ಭವನ, ನವ ಜಿಲ್ಲೆ ನಿರ್ಮಾಣ, ಕಾವೇರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ತಂದಿದ್ದು ನಾನು. ಈಗ ನನ್ನನ್ನೇ ಕಡೆಗಣಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಕರು ಮತ್ತು ಪದವೀಧರರು ಮತಹಾಕಲು ಹಣ ಪಡೆಯುತ್ತಿದ್ದಾರೆ. ಇದಕ್ಕೆ ಕಳೆದ ಶಿಕ್ಷಕರ ಮತ್ತು ಪದವೀಧರ ಚುನಾವಣೆಯೇ ಸಾಕ್ಷಿ. ಇದು ಬೇಸರದ ಸಂಗತಿ. ಆ ಚುನಾವಣೆಯಲ್ಲಿ ನಾನೂ ಸ್ಪರ್ಧಿಸಿದ್ದೆ. ಒಂದು ವೋಟಿಗೆ 9 ಸಾವಿರ ಕೊಟ್ಟ ವಿವೇಕಾನಂದ ಶಿಕ್ಷಕರ ವೋಟ್ ಪಡೆದಿದ್ದಾನೆ. ಇವತ್ತಿನ ಪರಿಸ್ಥಿತಿಯಲ್ಲಿ ಒಂದು ಎಂಎಲ್‌ಸಿ ಸ್ಥಾನ ಗೆಲ್ಲಲು ಸುಮಾರು 25 ಕೋಟಿ ಬೇಕು. ಈಗಿನ ವ್ಯವಸ್ಥೆ ಎಲ್ಲಾ ಹಾಳಾಗಿ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago