ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಬಂದಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಸಚಿವರ ಕಾರ್ಯವೈಖರಿ ಮಾಪನ ಮಾಡುವ ಕೆಲಸವನ್ನು ವರಿಷ್ಠರು ಮಾಡುತ್ತಿದ್ದಾರೆ. ಯಾರಿಗೆ ಹೈಕಮಾಂಡ್ ಅವಕಾಶ ಮಾಡುತ್ತೆ ಅವರಿಗೆ ಸಿಕ್ಕೇ ಸಿಗುತ್ತೆ. ಈ ಬಾರಿ ನನಗೆ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇದೆ. ಅವಕಾಶ ಸಿಗೋವರೆಗೂ ನಾನು ಕಾಯುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ
ಇನ್ನು ಕಾಂಗ್ರೆಸ್ ಕಾರ್ಯಕರ್ತರ ಪತ್ರ ಚಳುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಒತ್ತಡ ತರುವಂತ ಕೆಲಸವನ್ನು ಯಾವತ್ತು ಮಾಡಿಲ್ಲ. ವರಿಷ್ಠರು ಗುರುತಿಸಿ ಕೊಟ್ಟಾಗ ನಾನು ಅದನ್ನು ಸ್ವೀಕಾರ ಮಾಡುತ್ತೇನೆ. ಕಾರ್ಯಕರ್ತರು ಇಂತಹ ಕೆಲಸ ಮಾಡಬೇಡಿ. ಇದು ನನಗೆ ಮಾತ್ರವಲ್ಲ. ಕ್ಷೇತ್ರದ ಮತದಾರರಿಗೆ ಮಾಡುವ ಅಪಮಾನ. ಯಾರು ಈ ರೀತಿ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಇನ್ನು ಸಿಎಂ ರೇಸ್ನಿಂದ ಡಿ.ಕೆ.ಶಿವಕುಮಾರ್ ಹಿಂದೆ ಸರಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ಆಸೆ ಇಟ್ಟುಕೊಳ್ಳಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ನಾವೆಲ್ಲ ಒಂದು ವ್ಯವಸ್ಥೆ ಒಳಗೆ ಇದ್ದೇವೆ. ವರಿಷ್ಠರು ಏನು ತೀರ್ಮಾನ ಕೊಡ್ತಾರೆ ಅದೇ ಅಂತಿಮ. ಯಾರು ಬೇಕಾದರೂ ಮುಂದಿರ್ಲಿ ಹಿಂದೆ ಇರ್ಲಿ. ಆಸೆಗಳು ನೈಜ ಸ್ವರೂಪದಲ್ಲಿದ್ದಾಗ ಅವರಿಗೆ ಸ್ಪಂದನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…