ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಬಂದಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಸಚಿವರ ಕಾರ್ಯವೈಖರಿ ಮಾಪನ ಮಾಡುವ ಕೆಲಸವನ್ನು ವರಿಷ್ಠರು ಮಾಡುತ್ತಿದ್ದಾರೆ. ಯಾರಿಗೆ ಹೈಕಮಾಂಡ್ ಅವಕಾಶ ಮಾಡುತ್ತೆ ಅವರಿಗೆ ಸಿಕ್ಕೇ ಸಿಗುತ್ತೆ. ಈ ಬಾರಿ ನನಗೆ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇದೆ. ಅವಕಾಶ ಸಿಗೋವರೆಗೂ ನಾನು ಕಾಯುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ
ಇನ್ನು ಕಾಂಗ್ರೆಸ್ ಕಾರ್ಯಕರ್ತರ ಪತ್ರ ಚಳುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಒತ್ತಡ ತರುವಂತ ಕೆಲಸವನ್ನು ಯಾವತ್ತು ಮಾಡಿಲ್ಲ. ವರಿಷ್ಠರು ಗುರುತಿಸಿ ಕೊಟ್ಟಾಗ ನಾನು ಅದನ್ನು ಸ್ವೀಕಾರ ಮಾಡುತ್ತೇನೆ. ಕಾರ್ಯಕರ್ತರು ಇಂತಹ ಕೆಲಸ ಮಾಡಬೇಡಿ. ಇದು ನನಗೆ ಮಾತ್ರವಲ್ಲ. ಕ್ಷೇತ್ರದ ಮತದಾರರಿಗೆ ಮಾಡುವ ಅಪಮಾನ. ಯಾರು ಈ ರೀತಿ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಇನ್ನು ಸಿಎಂ ರೇಸ್ನಿಂದ ಡಿ.ಕೆ.ಶಿವಕುಮಾರ್ ಹಿಂದೆ ಸರಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ಆಸೆ ಇಟ್ಟುಕೊಳ್ಳಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ನಾವೆಲ್ಲ ಒಂದು ವ್ಯವಸ್ಥೆ ಒಳಗೆ ಇದ್ದೇವೆ. ವರಿಷ್ಠರು ಏನು ತೀರ್ಮಾನ ಕೊಡ್ತಾರೆ ಅದೇ ಅಂತಿಮ. ಯಾರು ಬೇಕಾದರೂ ಮುಂದಿರ್ಲಿ ಹಿಂದೆ ಇರ್ಲಿ. ಆಸೆಗಳು ನೈಜ ಸ್ವರೂಪದಲ್ಲಿದ್ದಾಗ ಅವರಿಗೆ ಸ್ಪಂದನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…