ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಬಂದಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಸಚಿವರ ಕಾರ್ಯವೈಖರಿ ಮಾಪನ ಮಾಡುವ ಕೆಲಸವನ್ನು ವರಿಷ್ಠರು ಮಾಡುತ್ತಿದ್ದಾರೆ. ಯಾರಿಗೆ ಹೈಕಮಾಂಡ್ ಅವಕಾಶ ಮಾಡುತ್ತೆ ಅವರಿಗೆ ಸಿಕ್ಕೇ ಸಿಗುತ್ತೆ. ಈ ಬಾರಿ ನನಗೆ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇದೆ. ಅವಕಾಶ ಸಿಗೋವರೆಗೂ ನಾನು ಕಾಯುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ
ಇನ್ನು ಕಾಂಗ್ರೆಸ್ ಕಾರ್ಯಕರ್ತರ ಪತ್ರ ಚಳುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಒತ್ತಡ ತರುವಂತ ಕೆಲಸವನ್ನು ಯಾವತ್ತು ಮಾಡಿಲ್ಲ. ವರಿಷ್ಠರು ಗುರುತಿಸಿ ಕೊಟ್ಟಾಗ ನಾನು ಅದನ್ನು ಸ್ವೀಕಾರ ಮಾಡುತ್ತೇನೆ. ಕಾರ್ಯಕರ್ತರು ಇಂತಹ ಕೆಲಸ ಮಾಡಬೇಡಿ. ಇದು ನನಗೆ ಮಾತ್ರವಲ್ಲ. ಕ್ಷೇತ್ರದ ಮತದಾರರಿಗೆ ಮಾಡುವ ಅಪಮಾನ. ಯಾರು ಈ ರೀತಿ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಇನ್ನು ಸಿಎಂ ರೇಸ್ನಿಂದ ಡಿ.ಕೆ.ಶಿವಕುಮಾರ್ ಹಿಂದೆ ಸರಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ಆಸೆ ಇಟ್ಟುಕೊಳ್ಳಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ನಾವೆಲ್ಲ ಒಂದು ವ್ಯವಸ್ಥೆ ಒಳಗೆ ಇದ್ದೇವೆ. ವರಿಷ್ಠರು ಏನು ತೀರ್ಮಾನ ಕೊಡ್ತಾರೆ ಅದೇ ಅಂತಿಮ. ಯಾರು ಬೇಕಾದರೂ ಮುಂದಿರ್ಲಿ ಹಿಂದೆ ಇರ್ಲಿ. ಆಸೆಗಳು ನೈಜ ಸ್ವರೂಪದಲ್ಲಿದ್ದಾಗ ಅವರಿಗೆ ಸ್ಪಂದನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…