ಮೈಸೂರು ನಗರ

ಮೈಸೂರು ಜೈಲಿನಲ್ಲಿ ಎಸೆನ್ಸ್‌ ಕುಡಿದಿದ್ದ ಪ್ರಕರಣ: ಮತ್ತೊಬ್ಬ ಕೈದಿ ಸಾವು

ಮೈಸೂರು: ಇಲ್ಲಿನ ಜೈಲಿನಲ್ಲಿ ಎಸೆನ್ಸ್‌ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಕೈದಿ ರಮೇಶ್‌ ಎಂಬುವವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮೈಸೂರಿನ ಕಾರಾಗೃಹದಲ್ಲಿ ಹೊಸ ವರ್ಷದ ಹಿನ್ನೆಲೆ ಕೇಕ್‌ ತಯಾರಿಸಲು ತರಿಸಿದ್ದ ಎಸೆನ್ಸ್‌ಅನ್ನು ಕಿಕ್‌ಗಾಗಿ ಕುಡಿದಿದ್ದ ಮೈಸೂರಿನ ಮಾದೇಶ್‌, ಚಾಮರಾಜನಗರದ ನಾಗರಾಜು ಹಾಗೂ ರಮೇಶ್‌ ಎಂಬುವವರು ಅಸ್ವಸ್ಥರಾಗಿದ್ದರು. ಹೀಗಾಗಿ ಈ ಮೂವರು ಕೈದಿಯನ್ನು ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ.

ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಹೊಸ ವರ್ಷದ ಕೇಕ್‌ ತಯಾರಿಸಲು ತರಿಸಿದ್ದ ಎಸೆನ್ಸ್‌ ಅನ್ನು ಡಿಸೆಂಬರ್‌.28ರಂದೇ ಕುಡಿದು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಬಳಿಕ ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕೆಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಈ ಮೂವರು ಕೈದಿಗಳು ವಿಚಾರವನ್ನು ಮುಚ್ಚಿಟ್ಟಿದ್ದು, ವೈದ್ಯರು ಪ್ರಶ್ನಿಸಿದಾಗ ಸತ್ಯವನ್ನು ಹೇಳಿದ್ದರು.

ಆದಾಗ್ಯೂ ಸಾಕಷ್ಟು ವಿಳಂಬವಾದ ಹಿನ್ನೆಲೆಯಲ್ಲಿ, ಚಿಕಿತ್ಸೆ ಫಲಕಾರಿಯಾಗದೇ ಮಾದೇಶ್‌ ಹಾಗೂ ನಾಗರಾಜು ಎಂಬುವವರು ಮೃತಪಟ್ಟಿದ್ದರು. ಆದರೆ ಇದೀಗ ರಮೇಶ್‌ ಎಂಬುವವರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಪ್ರಕರಣ ಸದ್ಯ ಮಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಮೃತಪಟ್ಟ ಕೈದಿ ನಾಗರಾಜು ಅಣ್ಣನ ಮಗ ಮಲ್ಲು ಪ್ರತಿಕ್ರಿಯೆ ನೀಡಿ, 2024ರ ಡಿಸೆಂಬರ್‌ 26ರಂದು ನಮ್ಮ ಚಿಕ್ಕಪ್ಪನಿಗೆ ಕಿಡ್ನಿ ಫೇಲ್ಯೂರ್‌ ಆಗಿದೆ ಎಂದು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ನಾನು ನಮ್ಮ ಚಿಕ್ಕಪ್ಪನನ್ನು ಕೇಳಿದೆ. ಆ ವೇಳೆ ನಮ್ಮ ಚಿಕ್ಕಪ್ಪ ಕ್ರಿಸ್‌ಮಸ್‌ಗೆ ತಯಾರಿಸಿದ್ದ ಕೇಕ್‌ ತಿಂದು, ಬಿಸಿಬೇಳೆ ಬಾತ್‌ ತಿಂದಿದ್ದೆ ತಿಳಿಸಿದ್ದರು. ಅವರು ಕೇಕ್‌ ಹಾಗೂ ಬಿಸಿಬೇಳೆ ಬಾತ್‌ ತಿಂದ ನಂತರವೇ ಈ ಹೊಟ್ಟೆ ನೋವು ಬಂದಿದೆ. ಬಳಿಕ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago