ಮೈಸೂರು ನಗರ

ಮೈಸೂರು ಜೈಲಿನಲ್ಲಿ ಎಸೆನ್ಸ್‌ ಕುಡಿದಿದ್ದ ಪ್ರಕರಣ: ಮತ್ತೊಬ್ಬ ಕೈದಿ ಸಾವು

ಮೈಸೂರು: ಇಲ್ಲಿನ ಜೈಲಿನಲ್ಲಿ ಎಸೆನ್ಸ್‌ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಕೈದಿ ರಮೇಶ್‌ ಎಂಬುವವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮೈಸೂರಿನ ಕಾರಾಗೃಹದಲ್ಲಿ ಹೊಸ ವರ್ಷದ ಹಿನ್ನೆಲೆ ಕೇಕ್‌ ತಯಾರಿಸಲು ತರಿಸಿದ್ದ ಎಸೆನ್ಸ್‌ಅನ್ನು ಕಿಕ್‌ಗಾಗಿ ಕುಡಿದಿದ್ದ ಮೈಸೂರಿನ ಮಾದೇಶ್‌, ಚಾಮರಾಜನಗರದ ನಾಗರಾಜು ಹಾಗೂ ರಮೇಶ್‌ ಎಂಬುವವರು ಅಸ್ವಸ್ಥರಾಗಿದ್ದರು. ಹೀಗಾಗಿ ಈ ಮೂವರು ಕೈದಿಯನ್ನು ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ.

ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಹೊಸ ವರ್ಷದ ಕೇಕ್‌ ತಯಾರಿಸಲು ತರಿಸಿದ್ದ ಎಸೆನ್ಸ್‌ ಅನ್ನು ಡಿಸೆಂಬರ್‌.28ರಂದೇ ಕುಡಿದು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಬಳಿಕ ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕೆಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಈ ಮೂವರು ಕೈದಿಗಳು ವಿಚಾರವನ್ನು ಮುಚ್ಚಿಟ್ಟಿದ್ದು, ವೈದ್ಯರು ಪ್ರಶ್ನಿಸಿದಾಗ ಸತ್ಯವನ್ನು ಹೇಳಿದ್ದರು.

ಆದಾಗ್ಯೂ ಸಾಕಷ್ಟು ವಿಳಂಬವಾದ ಹಿನ್ನೆಲೆಯಲ್ಲಿ, ಚಿಕಿತ್ಸೆ ಫಲಕಾರಿಯಾಗದೇ ಮಾದೇಶ್‌ ಹಾಗೂ ನಾಗರಾಜು ಎಂಬುವವರು ಮೃತಪಟ್ಟಿದ್ದರು. ಆದರೆ ಇದೀಗ ರಮೇಶ್‌ ಎಂಬುವವರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಪ್ರಕರಣ ಸದ್ಯ ಮಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಮೃತಪಟ್ಟ ಕೈದಿ ನಾಗರಾಜು ಅಣ್ಣನ ಮಗ ಮಲ್ಲು ಪ್ರತಿಕ್ರಿಯೆ ನೀಡಿ, 2024ರ ಡಿಸೆಂಬರ್‌ 26ರಂದು ನಮ್ಮ ಚಿಕ್ಕಪ್ಪನಿಗೆ ಕಿಡ್ನಿ ಫೇಲ್ಯೂರ್‌ ಆಗಿದೆ ಎಂದು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ನಾನು ನಮ್ಮ ಚಿಕ್ಕಪ್ಪನನ್ನು ಕೇಳಿದೆ. ಆ ವೇಳೆ ನಮ್ಮ ಚಿಕ್ಕಪ್ಪ ಕ್ರಿಸ್‌ಮಸ್‌ಗೆ ತಯಾರಿಸಿದ್ದ ಕೇಕ್‌ ತಿಂದು, ಬಿಸಿಬೇಳೆ ಬಾತ್‌ ತಿಂದಿದ್ದೆ ತಿಳಿಸಿದ್ದರು. ಅವರು ಕೇಕ್‌ ಹಾಗೂ ಬಿಸಿಬೇಳೆ ಬಾತ್‌ ತಿಂದ ನಂತರವೇ ಈ ಹೊಟ್ಟೆ ನೋವು ಬಂದಿದೆ. ಬಳಿಕ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

7 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

13 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

13 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

13 hours ago