ಮೈಸೂರು: ಮುಡಾದವರು ಏಕಾಏಕಿ ಬಡವರ ಮನೆಗೆ ಬಂದು ಯಾವುದೇ ನೋಟಿಸ್ ನೀಡದೇ ತೆರವು ಮಾಡಿದ್ದು, ಸರ್ವೇ ನಂಬರ್ 108, 109 ಜಾಗವು 2002ರಲ್ಲಿ ಭೂ ಸ್ವಾಧೀನವಾಗಿದೆ ಎಂದು ವಕೀಲ ಹೃತಿಕ್ ಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂಚೆ ಈ ಜಾಗ ಬಸವನಹಳ್ಳಿ ಗ್ರಾಮಕ್ಕೆ ಸೇರಿತ್ತು. ಇದೀಗ ವಿಜಯನಗರ 4ನೇ ಹಂತಕ್ಕೆ ಬಡಾವಣೆ ಮಾಡಲು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಬಂದು ಜಾಗ ತೆರವಿಗೆ ಮುಂದಾಗಿದ್ದಾರೆ. ಜಾಗಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಪ್ರಕರಣ ಬಾಕಿಯಿದೆ ಎಂದು ಮಾಹಿತಿ ನೀಡಿದರು.
ರಿಟ್ ಅರ್ಜಿ 1427/2024 ಹೈಕೋರ್ಟ್ನಲ್ಲಿ ಪೆಂಡಿಂಗ್ ಇದೆ. ಆದರೂ ಏಕಏಕಿ ಬಂದು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿದ್ದಾರೆ. 25 ವರ್ಷಗಳಿಂದ ಖಾತೆ, ಕಂದಾಯ, ಎಲೆಕ್ಟ್ರಿಕಲ್ ಬಿಲ್ ಎಲ್ಲವು ಸಹ ವಾಸವಿರುವವರ ಹೆಸರಿನಲ್ಲಿದೆ. ಕಾನೂನಿನ್ವಯ ಈ ಜಾಗದಲ್ಲಿ ವಾಸವಿದ್ದಾರೆ. ಪ್ರಕರಣ ಯಾವುದೇ ನ್ಯಾಯಾಲಯದಲ್ಲೂ ಬಾಕಿ ಇರುವ ವೇಳೆ ಕಾನೂನಿನ್ವಯ ವಾಸಿಸುವ ಜನರನ್ನು ಹೊರದೂಡುವಂತಿಲ್ಲ. 2004ರ ತನಕ ಆರ್ಟಿಸಿ ಇದ್ದು ಪುಟ್ಟಮಾದಯ್ಯ ಎನ್ನುವವರಿಂದ ಬಂದಿರುವ ಜಾಗಕ್ಕೆ ಮೂವರು ಮಂದಿ ಮೊಮ್ಮಕ್ಕಳು ವಾರಸುದಾರರಾಗಿದ್ದಾರೆ.
ಹೈಕೋರ್ಟ್ನ ಡಬಲ್ ಬೆಂಚ್ನಲ್ಲಿ ಪ್ರಕರಣ ಪೆಂಡಿಂಗ್ ಇದೆ. ಆದರೂ ಸಹ ಮುಡಾ ಅಧಿಕಾರಿಗಳು ಲೆಕ್ಕಕ್ಕೆ ತೆಗೆದುಕೊಳ್ಳದೆ ಜಾಗ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…