ಮೈಸೂರು ನಗರ

ಮುಡಾ ಅಧಿಕಾರಿಗಳಿಂದ 8 ಎಕರೆ 28 ಗುಂಟೆ ಜಾಗ ವಶ ಪ್ರಕರಣ: ವಕೀಲ ಹೃತಿಕ್ ಗೌಡ ಪ್ರತಿಕ್ರಿಯೆ

ಮೈಸೂರು: ಮುಡಾದವರು ಏಕಾಏಕಿ ಬಡವರ ಮನೆಗೆ ಬಂದು ಯಾವುದೇ ನೋಟಿಸ್ ನೀಡದೇ ತೆರವು ಮಾಡಿದ್ದು, ಸರ್ವೇ ನಂಬರ್ 108, 109 ಜಾಗವು 2002ರಲ್ಲಿ ಭೂ ಸ್ವಾಧೀನವಾಗಿದೆ ಎಂದು ವಕೀಲ ಹೃತಿಕ್‌ ಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಂಚೆ ಈ ಜಾಗ ಬಸವನಹಳ್ಳಿ ಗ್ರಾಮಕ್ಕೆ ಸೇರಿತ್ತು. ಇದೀಗ ವಿಜಯನಗರ 4ನೇ ಹಂತಕ್ಕೆ ಬಡಾವಣೆ ಮಾಡಲು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಬಂದು ಜಾಗ ತೆರವಿಗೆ ಮುಂದಾಗಿದ್ದಾರೆ. ಜಾಗಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿಯಿದೆ ಎಂದು ಮಾಹಿತಿ ನೀಡಿದರು.

ರಿಟ್ ಅರ್ಜಿ 1427/2024 ಹೈಕೋರ್ಟ್‌ನಲ್ಲಿ ಪೆಂಡಿಂಗ್ ಇದೆ. ಆದರೂ ಏಕಏಕಿ ಬಂದು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿದ್ದಾರೆ. 25 ವರ್ಷಗಳಿಂದ ಖಾತೆ, ಕಂದಾಯ, ಎಲೆಕ್ಟ್ರಿಕಲ್ ಬಿಲ್ ಎಲ್ಲವು ಸಹ ವಾಸವಿರುವವರ ಹೆಸರಿನಲ್ಲಿದೆ. ಕಾನೂನಿನ್ವಯ ಈ ಜಾಗದಲ್ಲಿ ವಾಸವಿದ್ದಾರೆ. ಪ್ರಕರಣ ಯಾವುದೇ ನ್ಯಾಯಾಲಯದಲ್ಲೂ ಬಾಕಿ ಇರುವ ವೇಳೆ ಕಾನೂನಿನ್ವಯ ವಾಸಿಸುವ ಜನರನ್ನು ಹೊರದೂಡುವಂತಿಲ್ಲ. 2004ರ ತನಕ ಆರ್‌ಟಿಸಿ ಇದ್ದು ಪುಟ್ಟಮಾದಯ್ಯ ಎನ್ನುವವರಿಂದ ಬಂದಿರುವ ಜಾಗಕ್ಕೆ ಮೂವರು ಮಂದಿ ಮೊಮ್ಮಕ್ಕಳು ವಾರಸುದಾರರಾಗಿದ್ದಾರೆ.

ಹೈಕೋರ್ಟ್‌ನ ಡಬಲ್ ಬೆಂಚ್‌ನಲ್ಲಿ ಪ್ರಕರಣ ಪೆಂಡಿಂಗ್ ಇದೆ. ಆದರೂ ಸಹ ಮುಡಾ ಅಧಿಕಾರಿಗಳು ಲೆಕ್ಕಕ್ಕೆ ತೆಗೆದುಕೊಳ್ಳದೆ ಜಾಗ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

1 hour ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

1 hour ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

2 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

2 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

2 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago