ಮೈಸೂರು ನಗರ

ಕರ್ನಾಟಕದಲ್ಲಿ ಜಾತಿಗಣತಿ ವಿಫಲವಾಗಿದೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾಡಿದ್ದಾರೆ.

ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತಿಗಣತಿ ವಿಚಾರವಾಗಿ ಯಾರಿಗೂ ತೃಪ್ತಿ ಸಿಕ್ಕಿಲ್ಲ. ತೆರಿಗೆ ಹಣ ಬಳಸಿ ಗಣತಿ ಮಾಡಿದ್ದಾರೆ. ಅದನ್ನು ಬಿಡುಗಡೆ ಮಾಡದೆ ತಮಾಷೆ ಮಾಡಿದ್ದಾರೆ. ಅವರ ಹೈಕಮಾಂಡ್ ಹೇಳಿದೆ ಎಂದು ಕಸದ ಬುಟ್ಟಿಗೆ ಹಾಕಿದ್ರು.

ಈಗ ಮತ್ತೆ ಹಣ ಖರ್ಚು ಮಾಡಿ ಜಾತಿಗಣತಿ ಮಾಡಲು ಹೊರಟಿದ್ದಾರೆ. ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಗಣತಿ ಮಾಡಲು ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರ ಒಳ್ಳೆಯ ಗಣತಿ ಮಾಡುತ್ತದೆ. ಕಾಂಗ್ರೆಸ್ ಕೇಂದ್ರದಲ್ಲಿ ಅವಕಾಶ ಸಿಕ್ಕಾಗ ಗಣತಿ ಮಾಡಿಲ್ಲ. ಕರ್ನಾಟಕದಲ್ಲಿ ಜಾತಿಗಣತಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಇನ್ನು ಸಾಧನಾ ಸಮಾವೇಶದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರವಾಗಿ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದನ್ನು ಬಿಟ್ಟು ಒಂದು ಪತ್ರ ಹೊರಡಿಸಲಿ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago