yaduveer wodeyer
ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾಡಿದ್ದಾರೆ.
ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತಿಗಣತಿ ವಿಚಾರವಾಗಿ ಯಾರಿಗೂ ತೃಪ್ತಿ ಸಿಕ್ಕಿಲ್ಲ. ತೆರಿಗೆ ಹಣ ಬಳಸಿ ಗಣತಿ ಮಾಡಿದ್ದಾರೆ. ಅದನ್ನು ಬಿಡುಗಡೆ ಮಾಡದೆ ತಮಾಷೆ ಮಾಡಿದ್ದಾರೆ. ಅವರ ಹೈಕಮಾಂಡ್ ಹೇಳಿದೆ ಎಂದು ಕಸದ ಬುಟ್ಟಿಗೆ ಹಾಕಿದ್ರು.
ಈಗ ಮತ್ತೆ ಹಣ ಖರ್ಚು ಮಾಡಿ ಜಾತಿಗಣತಿ ಮಾಡಲು ಹೊರಟಿದ್ದಾರೆ. ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಗಣತಿ ಮಾಡಲು ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರ ಒಳ್ಳೆಯ ಗಣತಿ ಮಾಡುತ್ತದೆ. ಕಾಂಗ್ರೆಸ್ ಕೇಂದ್ರದಲ್ಲಿ ಅವಕಾಶ ಸಿಕ್ಕಾಗ ಗಣತಿ ಮಾಡಿಲ್ಲ. ಕರ್ನಾಟಕದಲ್ಲಿ ಜಾತಿಗಣತಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಇನ್ನು ಸಾಧನಾ ಸಮಾವೇಶದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರವಾಗಿ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದನ್ನು ಬಿಟ್ಟು ಒಂದು ಪತ್ರ ಹೊರಡಿಸಲಿ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…