ಮೈಸೂರು ನಗರ

ಜಾತಿಗಣತಿ ಅನ್ನೋದು ಅವೈಜ್ಞಾನಿಕ: ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಮೈಸೂರು: ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ. ಪ್ರಧಾನಿ ಮೋದಿ ಕೈ ಬಲಗೊಳ್ಳಲಿ ಎಂದು ಪ್ರತಿ ಬಾರಿಯಂತೆ ಈ ಬಾರಿಯು 1001 ಮೆಟ್ಟಿಲು ಏರಿ ತಾಯಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದೇನೆ. ನಾಳೆ ಮಾವುತರ ಜೊತೆ ಉಪಹಾರ ಸೇವಿಸುತ್ತೇನೆ ಎಂದರು.

ಇದನ್ನು ಓದಿ : ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ

ಇನ್ನು ರಾಜ್ಯದಲ್ಲಿ ಅತಿವೃಷ್ಠಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರ ನೀಡುತ್ತಿಲ್ಲವೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಯಾವಾಗ ಎಲ್ಲಿ ಯಾರಿಗೆ ಪರಿಹಾರ ನೀಡಿದೆ ಹೇಳಿ.? ಬರಿ ರಸ್ತೆಗುಂಡಿಗಳನ್ನೇ ಮುಚ್ಚಲು ಸಾದ್ಯವಾಗಲಿಲ್ಲ. ಜನ ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ಆದ್ರೆ ರಾಜ್ಯ ಸರ್ಕಾರದ ಬಳಿ ಅಕ್ಕಿ ಸಾಗಿಸುವ ಲಾರಿಗಳಿಗೆ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಕಂಟ್ರ್ಯಾಕ್ಟರ್‌ಗಳು 80 ಪರ್ಸೆಂಟ್ ಭ್ರಷ್ಟಾಚಾರ ಎಂದು ಹೇಳುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ ಜನರಿಗೆ ಪರಿಹಾರ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಎಲ್ಲವನ್ನೂ ತಿಂದು ತೇಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಇನ್ನು ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರವಾಗಿದೆ. 7 ಕೋಟಿ ಜನರ ಗಣತಿ ಕಡಿಮೆ ಅವಧಿಯಲ್ಲಿ ಮಾಡಲು ಸಾಧ್ಯನಾ? ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

 

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

8 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

9 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

9 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago