shobha karandlaje
ಮೈಸೂರು: ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ. ಪ್ರಧಾನಿ ಮೋದಿ ಕೈ ಬಲಗೊಳ್ಳಲಿ ಎಂದು ಪ್ರತಿ ಬಾರಿಯಂತೆ ಈ ಬಾರಿಯು 1001 ಮೆಟ್ಟಿಲು ಏರಿ ತಾಯಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದೇನೆ. ನಾಳೆ ಮಾವುತರ ಜೊತೆ ಉಪಹಾರ ಸೇವಿಸುತ್ತೇನೆ ಎಂದರು.
ಇದನ್ನು ಓದಿ : ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಇನ್ನು ರಾಜ್ಯದಲ್ಲಿ ಅತಿವೃಷ್ಠಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರ ನೀಡುತ್ತಿಲ್ಲವೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಯಾವಾಗ ಎಲ್ಲಿ ಯಾರಿಗೆ ಪರಿಹಾರ ನೀಡಿದೆ ಹೇಳಿ.? ಬರಿ ರಸ್ತೆಗುಂಡಿಗಳನ್ನೇ ಮುಚ್ಚಲು ಸಾದ್ಯವಾಗಲಿಲ್ಲ. ಜನ ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ಆದ್ರೆ ರಾಜ್ಯ ಸರ್ಕಾರದ ಬಳಿ ಅಕ್ಕಿ ಸಾಗಿಸುವ ಲಾರಿಗಳಿಗೆ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಕಂಟ್ರ್ಯಾಕ್ಟರ್ಗಳು 80 ಪರ್ಸೆಂಟ್ ಭ್ರಷ್ಟಾಚಾರ ಎಂದು ಹೇಳುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ ಜನರಿಗೆ ಪರಿಹಾರ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಎಲ್ಲವನ್ನೂ ತಿಂದು ತೇಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಇನ್ನು ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರವಾಗಿದೆ. 7 ಕೋಟಿ ಜನರ ಗಣತಿ ಕಡಿಮೆ ಅವಧಿಯಲ್ಲಿ ಮಾಡಲು ಸಾಧ್ಯನಾ? ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…