ಮೈಸೂರು ನಗರ

ಜಾತಿಗಣತಿ ವಿಚಾರ: ಕಾನೂನು ಹೋರಾಟಕ್ಕೆ ಮುಂದಾದ ಸ್ನೇಹಮಯಿ ಕೃಷ್ಣ

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಿ ಒಂದು ವರ್ಷದ ಹಿಂದೆಯೇ ಸಿಎಂ ಸಿದ್ದರಾಮಯ್ಯ,ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು‌. ಇ ಮೇಲ್ ಮೂಲಕ ಮತ್ತು ನೋಂದಾಯಿತ ಅಂಚೆ ಮೂಲಕ ಪತ್ರ ಬರೆದಿದ್ದ ಸ್ನೇಹಮಯಿ ಕೃಷ್ಣಗೆ ಇದುವರೆಗೂ ಯಾವುದೇ ಸ್ಪಷ್ಟನೆ ಬಂದಿಲ್ಲ.

ಇದನ್ನೂ ಓದಿ:-ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾದರೆ ಸಿಡಿದೇಳಬೇಕಾಗುತ್ತದೆ:ಡಿ.ವಿ.ಸದಾನಂದಗೌಡ

ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸ್ನೇಹಮಯಿ ಕೃಷ್ಣ ಅವರು, ಇದುವರೆಗೂ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಸುಳ್ಳು ಸೃಷ್ಟನೆಯಾಗಿರುವ ಮತ್ತು ದೊಡ್ಡ ಮಟ್ಟದ ಅಪರಾಧ ಕೃತ್ಯವಾಗಿರುವ ಜಾತಿ ಗಣತಿಗೆ ಮನ್ನಣೆ ನೀಡಲು ಪ್ರಯತ್ನಿಸುತ್ತಿರುವ ಬಗ್ಗೆ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ, ಸುಳ್ಳು ವರದಿ ನೀಡಿರುವವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಆಗ್ರಹಿಸಿದ್ದಾರೆ.

ಹೆಚ್ಚಿನ ಸಿದ್ದಿ: ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಒಟ್ಟಾರೆ ರಾಜ್ಯದಲ್ಲಿ ಜಾತಿ ಗಣತಿ ವರದಿಯ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಏನೆಲ್ಲಾ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 mins ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

23 mins ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

2 hours ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

13 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

16 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

17 hours ago