ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಿ ಒಂದು ವರ್ಷದ ಹಿಂದೆಯೇ ಸಿಎಂ ಸಿದ್ದರಾಮಯ್ಯ,ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಇ ಮೇಲ್ ಮೂಲಕ ಮತ್ತು ನೋಂದಾಯಿತ ಅಂಚೆ ಮೂಲಕ ಪತ್ರ ಬರೆದಿದ್ದ ಸ್ನೇಹಮಯಿ ಕೃಷ್ಣಗೆ ಇದುವರೆಗೂ ಯಾವುದೇ ಸ್ಪಷ್ಟನೆ ಬಂದಿಲ್ಲ.
ಇದನ್ನೂ ಓದಿ:-ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾದರೆ ಸಿಡಿದೇಳಬೇಕಾಗುತ್ತದೆ:ಡಿ.ವಿ.ಸದಾನಂದಗೌಡ
ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸ್ನೇಹಮಯಿ ಕೃಷ್ಣ ಅವರು, ಇದುವರೆಗೂ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಸುಳ್ಳು ಸೃಷ್ಟನೆಯಾಗಿರುವ ಮತ್ತು ದೊಡ್ಡ ಮಟ್ಟದ ಅಪರಾಧ ಕೃತ್ಯವಾಗಿರುವ ಜಾತಿ ಗಣತಿಗೆ ಮನ್ನಣೆ ನೀಡಲು ಪ್ರಯತ್ನಿಸುತ್ತಿರುವ ಬಗ್ಗೆ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ, ಸುಳ್ಳು ವರದಿ ನೀಡಿರುವವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಆಗ್ರಹಿಸಿದ್ದಾರೆ.
ಹೆಚ್ಚಿನ ಸಿದ್ದಿ: ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ
ಒಟ್ಟಾರೆ ರಾಜ್ಯದಲ್ಲಿ ಜಾತಿ ಗಣತಿ ವರದಿಯ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಏನೆಲ್ಲಾ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…