ಮೈಸೂರು ನಗರ

ರಾಜಕೀಯಕ್ಕಾಗಿ ಜಾತಿಗಣತಿ ಸಮೀಕ್ಷೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ನಾಳೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಮಯದಲ್ಲಿ ಜನರು ಬೇರೆಡೆ ಹೋಗುತ್ತಾರೆ. ಇಂತಹ ವೇಳೆಯಲ್ಲಿ ದತ್ತಾಂಶ ಸಂಗ್ರಹ ಸಾಧ್ಯವಿಲ್ಲ. ಮನೆ ಮನೆಗೆ ಹೋಗಿ ಗಣತಿ ಮಾಡಲು ಆಗುವುದಿಲ್ಲ. ಆದ್ದರಿಂದ ಕೇವಲ ರಾಜಕೀಯಕ್ಕಾಗಿ ಕಾಂಗ್ರೆಸ್‌ ಜಾತಿಗಣತಿ ಸಮೀಕ್ಷೆ ಮಾಡುತ್ತಿದೆ. ಈ ಸಮಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುವುದು ಸರಿಯಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಇನ್ನು ಲೇಖಕಿ ಬಾನು‌ ಮುಷ್ತಾಕ್ ದಸರಾ ಉದ್ಘಾಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾಳೆ ದಸರಾ ಉದ್ಘಾಟನೆ ಆಗಲಿ. ಪ್ರಸ್ತುತ ರಾಜಕೀಯಕ್ಕೂ ಇದಕ್ಕೂ ಸಂಬಂಧ ಇಲ್ಲ. 2023ರಲ್ಲಿ ಕನ್ನಡ ವೇದಿಕೆ ಹೇಳಿಕೆ ವಿರುದ್ಧ ನಮ್ಮ ವಿರೋಧ ಇತ್ತು. ನಾಳಿನ ವೇದಿಕೆಯಲ್ಲಿ ಯಾರ ಭಾವನೆಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುಲಿ ಎನ್ನುವುದು ನಮ್ಮ ಆಗ್ರಹ.

ನಾಳಿನ‌ ಉದ್ಘಾಟನಾ ಕಾರ್ಯಕ್ರಮಕ್ಕೆ ನಾನು ಭಾಗಿಯಾಗಲ್ಲ. ಯಾಕೆಂದರೆ ನನಗೆ ಅರಮನೆಯಲ್ಲಿ ಕಂಕಣ ಕಟ್ಟಿರುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳು ಇರುತ್ತವೆ. ಹಾಗಾಗಿ ನಾನು ಭಾಗಿಯಾಗಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

6 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago