ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು. ಇದೀಗ ಪೊಲೀಸರು ಕೃಷ್ಣ ಅವರ ಮೈಸೂರು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ನ್ಯಾಯಾಲಯದ ಬಳಿ ಕೃಷ್ಣ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರ ತಂಡ ಮದ್ಯಾಹ್ನ 3 ಗಂಟೆ ವೇಳೆಗೆ ಸರ್ಚ್ ವಾರೆಂಟ್ ಪಡೆದು ಮೈಸೂರಿಗೆ ಆಗಮಿಸಿದ್ದಾರೆ. ನಂತರ ನಗರದ ಗುಂಡುರಾವ್ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಅವರು ಮೊದಲಿಗೆ ಸ್ನೇಹಮಯಿ ಕೃಷ್ಣ ಅವರಿಗೆ ಸೇರಿದ್ದು ಎನ್ನಲಾದ ಶಿವ ಫೈನಾನ್ಸ್ ಕಚೇರಿಗೆ ತೆರಳಿ ಅಲ್ಲಿರುವ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ನಂತರ ಕಚೇರಿಯ ಹಿಂಬಾಗವಿರುವ ಕೃಷ್ಣ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸರ್ಚ್ ವಾರೆಂಟ್ ತೋರಿಸಿದ ಪೊಲೀಸರು, ನಂತರ ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಈ ವಳೆ ಮನೆ ಹಾಗೂ ಕಚೇರಿಯಲ್ಲಿ ಇದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸುಮಾರು 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಸಿಸಿಬಿಯ 6 ಪೊಲೀಸರ ತಂಡ ನಂತರ ಸ್ನೇಹಮಯಿ ಕೃಷ್ಣ ಅವರ ಬಂಡೀಪಾಳ್ಯದ ಮನೆಗೆ ತೆರಳಿ ಅಲ್ಲಿಯೂ ಕೂಡ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎನ್ನಲಾಗಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…