ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು. ಇದೀಗ ಪೊಲೀಸರು ಕೃಷ್ಣ ಅವರ ಮೈಸೂರು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ನ್ಯಾಯಾಲಯದ ಬಳಿ ಕೃಷ್ಣ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರ ತಂಡ ಮದ್ಯಾಹ್ನ 3 ಗಂಟೆ ವೇಳೆಗೆ ಸರ್ಚ್ ವಾರೆಂಟ್ ಪಡೆದು ಮೈಸೂರಿಗೆ ಆಗಮಿಸಿದ್ದಾರೆ. ನಂತರ ನಗರದ ಗುಂಡುರಾವ್ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಅವರು ಮೊದಲಿಗೆ ಸ್ನೇಹಮಯಿ ಕೃಷ್ಣ ಅವರಿಗೆ ಸೇರಿದ್ದು ಎನ್ನಲಾದ ಶಿವ ಫೈನಾನ್ಸ್ ಕಚೇರಿಗೆ ತೆರಳಿ ಅಲ್ಲಿರುವ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ನಂತರ ಕಚೇರಿಯ ಹಿಂಬಾಗವಿರುವ ಕೃಷ್ಣ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸರ್ಚ್ ವಾರೆಂಟ್ ತೋರಿಸಿದ ಪೊಲೀಸರು, ನಂತರ ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಈ ವಳೆ ಮನೆ ಹಾಗೂ ಕಚೇರಿಯಲ್ಲಿ ಇದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸುಮಾರು 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಸಿಸಿಬಿಯ 6 ಪೊಲೀಸರ ತಂಡ ನಂತರ ಸ್ನೇಹಮಯಿ ಕೃಷ್ಣ ಅವರ ಬಂಡೀಪಾಳ್ಯದ ಮನೆಗೆ ತೆರಳಿ ಅಲ್ಲಿಯೂ ಕೂಡ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎನ್ನಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…