ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸಿಸಿಬಿ (ಸೆಂಟ್ರಲ್ ಕ್ರೈಮ್ ಬ್ರಾಂಚ್) ಪೊಲೀಸರು ನಿಯಂತ್ರಣದಲ್ಲಿ ವೈಫಲ್ಯ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕಕ್ಕೆ ಗಂಭೀರ ಕ್ರಮ ಕೈಗೊಂಡಿದ್ದಾರೆ.
ಇತ್ತೀಚೆಗೆ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಇದನ್ನು ಕೇಂದ್ರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಅಧಿಕಾರಿಗಳು ಭೇದಿಸಿದರು. ಈ ಘಟನೆಯ ನಂತರ ಸಿಸಿಬಿ ಪೊಲೀಸರ ನಿರ್ಲಕ್ಷ್ಯ ಮತ್ತು ಗುಪ್ತಚರ ವೈಫಲ್ಯ ಎದ್ದುಕಾಣುತ್ತಿದೆ. ಇದರ ಹಿನ್ನೆಲೆಯಲ್ಲಿ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕದ 10 ಮಂದಿ ಸಿಬ್ಬಂದಿಯನ್ನು ವರ್ಗಾಯಿಸಿ, ಘಟಕಕ್ಕೆ ‘ಮೇಜರ್ ಸರ್ಜರಿ’ ನಡೆಸಿದ್ದಾರೆ.
ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ಮಾದಕ ವಸ್ತು ಮಾರಾಟ ಹಾಗೂ ಪೂರೈಕೆ ಜಾಲವನ್ನು ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ, ಡ್ರಗ್ ಮಾರಾಟಗಾರರ ಕುರಿತಾಗಿ ಲಭ್ಯವಾಗಿದ್ದ ಸುಳಿವುಗಳ ಮೇಲೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಮೈಸೂರಿನಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡು ಬಾರಿ (ಮಹಾರಾಷ್ಟ್ರ ಪೊಲೀಸ್ ಮತ್ತು ದೆಹಲಿ ಎನ್ಸಿಬಿ) ಹೊರಗಿನ ಏಜೆನ್ಸಿಗಳು ಡ್ರಗ್ಸ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ದೊಡ್ಡ ಆಘಾತವಾಗಿದೆ. ಇದರಿಂದ ನಗರದಲ್ಲಿ ಡ್ರಗ್ ಮಾಫಿಯಾ ಹೆಚ್ಚಾಗುತ್ತಿರುವ ಆತಂಕ ವ್ಯಕ್ತವಾಗಿದೆ. ಕಮಿಷನರ್ ಅವರು ಈ ವೈಫಲ್ಯಕ್ಕೆ ಜವಾಬ್ದಾರಿಯನ್ನು ಒಪ್ಪಿಕೊಂಡು, ಸಿಸಿಬಿ ಸಿಬ್ಬಂದಿಗೆ ಎಚ್ಚರಿಕೆ ನೀಡಿ ಕಠಿಣ ಕ್ರಮಗಳನ್ನು ಘೋಷಿಸಿದ್ದಾರೆ.
ಇದೀಗ ನಗರದ ಔದ್ಯೋಗಿಕ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಡ್ರಗ್ ಹಾವಳಿಯನ್ನು ಸಂಪೂರ್ಣ ನಿಯಂತ್ರಿಸುವ ಗುರಿಯನ್ನು ಹೊಂದಲಾಗಿದೆ. ಕಮಿಷನರ್ ಸೀಮಾ ಲಾಟ್ಕರ್ ಅವರು “ನಗರವನ್ನು ಡ್ರಗ್-ಮುಕ್ತಗೊಳಿಸುವಲ್ಲಿ ಯಾವುದೇ ರಾಜಿಯಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…