ಮೈಸೂರು ನಗರ

ಕದನ ವಿರಾಮ ಘೋಷಣೆ | ದೇಶದ ಜನರಿಗೆ ಸತ್ಯ ತಿಳಿಸಿ ; ಲಕ್ಷ್ಮಣ್‌ ಒತ್ತಾಯ

ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.

ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕ್ ಆಕ್ರಮಿತ ಪ್ರದೇಶ ವಶಪಡಿಸಿಕೊಳ್ಳಲು ಭಾರತಕ್ಕೆ ಒಂದು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನ ನರೇಂದ್ರ ಮೋದಿ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು ಕೇಳಿ ಕೈಚೆಲ್ಲಿ ಕೂತರು. ಇದು ಕೇವಲ ಇಬ್ಬರಿಗೋಸ್ಕರ ಕದನ ವಿರಾಮ ಘೋಷಣೆ ಮಾಡಿರೋದು. ಅವರು ಯಾರು ಅಂದರೆ ಅದಾನಿ, ಅಂಬಾನಿ. ಇವರಿಬ್ಬರ ವ್ಯಾಪಾರಕ್ಕೆ ಹೊಡೆತ ಬೀಳುತ್ತದೆ ಎನ್ನುವ ಉದ್ದೇಶಕ್ಕಾಗಿ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಟೀಕಿಸಿದರು.

ಇಡೀ ದೇಶದ ಜನರು ಭಾರತದ ಸೈನ್ಯಕ್ಕೆ ಕೈಜೋಡಿಸಿತ್ತು. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡಿದ್ದರು. ಪಾಕಿಸ್ತಾನವನ್ನು ಸುಲಭವಾಗಿ ಉಡಾಯಿಸಬಹುದಿತ್ತು. ಇದನ್ನು ಕೈ ಚೆಲ್ಲಿ ಭಾರತೀಯ ಸೈನಿಕರಿಗೆ ಅಪಮಾನ ಮಾಡುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ ಎಂದರು.

ಇದೆಲ್ಲಾ ಹೊಂದಾಣಕೆ ರಾಜಕೀಯ. ಈಗ ತಾನಾಗಿಯೇ ಇಂದಿರಾ ಗಾಂಧಿ ನೆನಪಿಸಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿ ಬಿಜೆಪಿ ಇಲ್ಲ ಅಂದರೆ ಬಿಜೆಪಿ ಇಲ್ಲ. ಹಿಂದೂ ಮುಸ್ಲಿಂರು ಎಂದು ಕೋಮು ಭಾವನೆ ತಂದು ಪಕ್ಷ ಅಧಿಕಾರಕ್ಕೆ ಬರೋದು ಒಂದೇ ಒಂದು ಉದ್ದೇಶ. ಇದನ್ನೇಲ್ಲ ಮಾತನಾಡಿದರೆ ನಾವು ದೇಶ ದ್ರೋಹಿಗಳು. ಮೊದಲು ನಿಮ್ಮ ವಿಶ್ವಗುರುವನ್ನು ದೇಶ ದ್ರೋಹಿ ಎಂದು ಜೈಲಿಗೆ ಹಾಕಬೇಕು ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

6 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

7 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

7 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

8 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

8 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

8 hours ago