Ceasefire declaration
ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.
ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕ್ ಆಕ್ರಮಿತ ಪ್ರದೇಶ ವಶಪಡಿಸಿಕೊಳ್ಳಲು ಭಾರತಕ್ಕೆ ಒಂದು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನ ನರೇಂದ್ರ ಮೋದಿ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು ಕೇಳಿ ಕೈಚೆಲ್ಲಿ ಕೂತರು. ಇದು ಕೇವಲ ಇಬ್ಬರಿಗೋಸ್ಕರ ಕದನ ವಿರಾಮ ಘೋಷಣೆ ಮಾಡಿರೋದು. ಅವರು ಯಾರು ಅಂದರೆ ಅದಾನಿ, ಅಂಬಾನಿ. ಇವರಿಬ್ಬರ ವ್ಯಾಪಾರಕ್ಕೆ ಹೊಡೆತ ಬೀಳುತ್ತದೆ ಎನ್ನುವ ಉದ್ದೇಶಕ್ಕಾಗಿ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಟೀಕಿಸಿದರು.
ಇಡೀ ದೇಶದ ಜನರು ಭಾರತದ ಸೈನ್ಯಕ್ಕೆ ಕೈಜೋಡಿಸಿತ್ತು. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡಿದ್ದರು. ಪಾಕಿಸ್ತಾನವನ್ನು ಸುಲಭವಾಗಿ ಉಡಾಯಿಸಬಹುದಿತ್ತು. ಇದನ್ನು ಕೈ ಚೆಲ್ಲಿ ಭಾರತೀಯ ಸೈನಿಕರಿಗೆ ಅಪಮಾನ ಮಾಡುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ ಎಂದರು.
ಇದೆಲ್ಲಾ ಹೊಂದಾಣಕೆ ರಾಜಕೀಯ. ಈಗ ತಾನಾಗಿಯೇ ಇಂದಿರಾ ಗಾಂಧಿ ನೆನಪಿಸಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿ ಬಿಜೆಪಿ ಇಲ್ಲ ಅಂದರೆ ಬಿಜೆಪಿ ಇಲ್ಲ. ಹಿಂದೂ ಮುಸ್ಲಿಂರು ಎಂದು ಕೋಮು ಭಾವನೆ ತಂದು ಪಕ್ಷ ಅಧಿಕಾರಕ್ಕೆ ಬರೋದು ಒಂದೇ ಒಂದು ಉದ್ದೇಶ. ಇದನ್ನೇಲ್ಲ ಮಾತನಾಡಿದರೆ ನಾವು ದೇಶ ದ್ರೋಹಿಗಳು. ಮೊದಲು ನಿಮ್ಮ ವಿಶ್ವಗುರುವನ್ನು ದೇಶ ದ್ರೋಹಿ ಎಂದು ಜೈಲಿಗೆ ಹಾಕಬೇಕು ಎಂದು ಕಿಡಿಕಾರಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…