ಮೈಸೂರು ನಗರ

ಕದನ ವಿರಾಮ ಘೋಷಣೆ | ದೇಶದ ಜನರಿಗೆ ಸತ್ಯ ತಿಳಿಸಿ ; ಲಕ್ಷ್ಮಣ್‌ ಒತ್ತಾಯ

ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.

ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕ್ ಆಕ್ರಮಿತ ಪ್ರದೇಶ ವಶಪಡಿಸಿಕೊಳ್ಳಲು ಭಾರತಕ್ಕೆ ಒಂದು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನ ನರೇಂದ್ರ ಮೋದಿ ಅವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು ಕೇಳಿ ಕೈಚೆಲ್ಲಿ ಕೂತರು. ಇದು ಕೇವಲ ಇಬ್ಬರಿಗೋಸ್ಕರ ಕದನ ವಿರಾಮ ಘೋಷಣೆ ಮಾಡಿರೋದು. ಅವರು ಯಾರು ಅಂದರೆ ಅದಾನಿ, ಅಂಬಾನಿ. ಇವರಿಬ್ಬರ ವ್ಯಾಪಾರಕ್ಕೆ ಹೊಡೆತ ಬೀಳುತ್ತದೆ ಎನ್ನುವ ಉದ್ದೇಶಕ್ಕಾಗಿ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಟೀಕಿಸಿದರು.

ಇಡೀ ದೇಶದ ಜನರು ಭಾರತದ ಸೈನ್ಯಕ್ಕೆ ಕೈಜೋಡಿಸಿತ್ತು. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡಿದ್ದರು. ಪಾಕಿಸ್ತಾನವನ್ನು ಸುಲಭವಾಗಿ ಉಡಾಯಿಸಬಹುದಿತ್ತು. ಇದನ್ನು ಕೈ ಚೆಲ್ಲಿ ಭಾರತೀಯ ಸೈನಿಕರಿಗೆ ಅಪಮಾನ ಮಾಡುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ ಎಂದರು.

ಇದೆಲ್ಲಾ ಹೊಂದಾಣಕೆ ರಾಜಕೀಯ. ಈಗ ತಾನಾಗಿಯೇ ಇಂದಿರಾ ಗಾಂಧಿ ನೆನಪಿಸಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿ ಬಿಜೆಪಿ ಇಲ್ಲ ಅಂದರೆ ಬಿಜೆಪಿ ಇಲ್ಲ. ಹಿಂದೂ ಮುಸ್ಲಿಂರು ಎಂದು ಕೋಮು ಭಾವನೆ ತಂದು ಪಕ್ಷ ಅಧಿಕಾರಕ್ಕೆ ಬರೋದು ಒಂದೇ ಒಂದು ಉದ್ದೇಶ. ಇದನ್ನೇಲ್ಲ ಮಾತನಾಡಿದರೆ ನಾವು ದೇಶ ದ್ರೋಹಿಗಳು. ಮೊದಲು ನಿಮ್ಮ ವಿಶ್ವಗುರುವನ್ನು ದೇಶ ದ್ರೋಹಿ ಎಂದು ಜೈಲಿಗೆ ಹಾಕಬೇಕು ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago