Mysore
28
overcast clouds

Social Media

ಬುಧವಾರ, 15 ಜುಲೈ 2026
Light
Dark

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.

ಮೈಸೂರಿನ ಬಲ್ಲಾಳ್ ವೃತ್ತದಲ್ಲಿ ಹೆಲಿಕಾಪ್ಟರ್ ಮೂಲಕ ಅಂಬೇಡ್ಕರ್ ಮತ್ತು ಬುದ್ದನ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಕೆ ಮಾಡಲಾಯಿತು. ತೆರೆದ ಅಲಂಕೃತ ವಾಹನಗಳಲ್ಲಿ ಪ್ರತಿಷ್ಠಾಪಿಸಿದ್ದ ಪ್ರತಿಮೆಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿ ಅಂಬೇಡ್ಕರ್‌ ಜಯಂತಿಯನ್ನು ಆಚರಣೆ ಮಾಡಲಾಯಿತು

ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ ಮೂಲಕ ನಡೆದ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ನೆತ್ತಿ ಸುಡುತ್ತಿದ್ದ ಬಿಸಿಲನ್ನು ಲೆಕ್ಕಿಸದೇ ಸಾವಿರಾರು ಜನರು ಭಾಗಿಯಾಗಿ ಈ ಕ್ಷಣವನ್ನು ಕಣ್ತುಂಬಿಕೊಂಡರು.

 

 

 

Tags:
error: Content is protected !!