ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದು, ಕೃಷಿ ಸಮಸ್ಯೆಗಳಿಗೆ ಪೂರಕವಲ್ಲದ, ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಮಂಡನೆಯಾಗಿರುವ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, ಕೇಂದ್ರ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುದಾನ ಹೆಚ್ಚಳ ಮಾಡಿದ್ದರೂ, ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದಿಕ್ಕಿನಲ್ಲಿ ಕಾರ್ಯಯೋಜನೆ ರೂಪಿಸಿಲ್ಲ.
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿ ಮಾಡುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕೃಷಿ ಕ್ಷೇತ್ರ ಶ್ರಮಿಕರ ಕ್ಷೇತ್ರವಾಗಿದೆ. ಡಿಜಿಟಲೀಕರಣ ಯಾವತ್ತೂ ಆಹಾರ ಉತ್ಪಾದನೆ ಮಾಡುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಮರೆತು ಹೋಗಿದೆ ಎಂದು ಕಿಡಿಕಾರಿದರು.
ಬಜೆಟ್ನಲ್ಲಿ ರೈತರಿಗೆ ಸಾಲ ನೀಡುವ ನೀತಿಯೂ ಜಾರಿಯಾಗಿಲ್ಲ. ಕರ್ನಾಟಕದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಕ್ಕೆ ಬಜೆಟ್ನಲ್ಲಿ ಅನ್ಯಾಯ ಮಾಡಿದ್ದಾರೆ. ನಮಗೆ ಇನ್ನೂ ಹೆಚ್ಚಿನ ಕೊಡುಗೆಗಳ ನಿರೀಕ್ಷೆ ಇತ್ತು. ರಾಜಕೀಯಕ್ಕೋಸ್ಕರ ಬಜೆಟ್ನಲ್ಲಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಆರೋಪಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು, ಕೇಂದ್ರ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಇಲ್ಲಿಂದ ಆಯ್ಕೆಯಾಗಿರುವ ಸಂಸದರು ಧನಿ ಎತ್ತಬೇಕು ಎಂದು ಮನವಿ ಮಾಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…