ಮೈಸೂರು ನಗರ

ಅಕ್ಕಿ ರಫ್ತಿಗೆ ಕೇಂದ್ರ ಸರ್ಕಾರ ನಿಷೇಧ: ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿ

ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಭತ್ತದ ಬೆಲೆ ಕುಸಿತವಾಗುವ ಆತಂಕ ಎದುರಾಗಲಿದೆ. ಈ ಬಗ್ಗೆ ಜುಲೈ.22ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದರು.

ಇನ್ನೂ ಜುಲೈ.21ರಂದು ಚಿಕ್ಕಬಳ್ಳಾಪುರದಲ್ಲಿ ರೈತರ ಹಿತಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡ ರೈತರ ನೆನೆಪಿಗಾಗಿ ರೈತ ಹುತಾತ್ಮ ದಿನ ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಇದರಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.

ಇನ್ನೂ ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜುಲೈ.22ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ಸಂಘಟನೆಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯು ರೈತರನ್ನು ವಂಚಿಸುತ್ತಿದೆ. ಈ ಬಗ್ಗೆ ಕಬ್ಬು ಬೆಳೆಗಾರರಿಗೆ ಜಾಗೃತಿ ಮೂಡಿಸಬೇಕು. ಹಾಗಾಗಿ ಜುಲೈ.18ರಂದು ಬಣ್ಣಾರಿ ಕಾರ್ಖಾನೆ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

6 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

8 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

11 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

15 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

19 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

19 hours ago