ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಭತ್ತದ ಬೆಲೆ ಕುಸಿತವಾಗುವ ಆತಂಕ ಎದುರಾಗಲಿದೆ. ಈ ಬಗ್ಗೆ ಜುಲೈ.22ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದರು.
ಇನ್ನೂ ಜುಲೈ.21ರಂದು ಚಿಕ್ಕಬಳ್ಳಾಪುರದಲ್ಲಿ ರೈತರ ಹಿತಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡ ರೈತರ ನೆನೆಪಿಗಾಗಿ ರೈತ ಹುತಾತ್ಮ ದಿನ ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಇದರಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.
ಇನ್ನೂ ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜುಲೈ.22ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ರೈತರನ್ನು ವಂಚಿಸುತ್ತಿದೆ. ಈ ಬಗ್ಗೆ ಕಬ್ಬು ಬೆಳೆಗಾರರಿಗೆ ಜಾಗೃತಿ ಮೂಡಿಸಬೇಕು. ಹಾಗಾಗಿ ಜುಲೈ.18ರಂದು ಬಣ್ಣಾರಿ ಕಾರ್ಖಾನೆ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…