ಮೈಸೂರು: ಕೇಂದ್ರ ತನಿಖಾ ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ತಮ್ಮ ಸ್ವತಂತ್ರತೆಯನ್ನು ಕಳೆದುಕೊಂಡಿವೆ. ಬಿಜೆಪಿ ತಾಳಕ್ಕೆ ತಕ್ಕಂತೆ ಈ ಸಂಸ್ಥೆಗಳು ಕುಣಿಯುತ್ತಿವೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಕೇಂದ್ರ ಬಿಜೆಪಿ ಮತ್ತು ರಾಜ್ಯ ಬಿಜೆಪಿಯಿಂದ ಜಾರಿ ನಿರ್ದೇಶನಾಲಯಕ್ಕೆ ಒತ್ತಡ ಇದೆ. ಆದ ಕಾರಣ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಅವರ ಹೆಸರು ಬಳಸುತ್ತಿದ್ದಾರೆ ಎಂದು ಹೇಳಿದರು.
ಮುಡಾ (MUDA)ದವರು ನಮ್ಮ ಜಮೀನು ವಶಪಡಿಸಿಕೊಂಡಿರುವುದಕ್ಕೆ ಪೂರಕವಾಗಿ ನಮಗೆ ಬದಲಿ ನಿವೇಶನ ನೀಡಿದ್ದಾರೆ. ಮುಡಾದಲ್ಲಿ ಆಗಿರುವ ಭ್ರಷ್ಟಾಚಾರಕ್ಕೂ ನಮ್ಮ 14 ನಿವೇಶನಗಳಿಗೂ ಯಾವುದೇ ಸಂಬಂಧವಿಲ್ಲ. ನಮಗೆ ನೀಡಿರುವ ಸೈಟು ಕಾನೂನಾತ್ಮಕವಾಗಿದೆ. ಇದು ಇಡಿಯವರಿಗೂ ಗೊತ್ತು. ಆದರೆ ಸಿದ್ದರಾಮಯ್ಯ ಅವರನ್ನು ಹೇಗಾದರೂ ಆರೋಪಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಬಿಜೆಪಿಯಿಂದ ಒತ್ತಡ ಇರುವುದರಿಂದ ತನಿಖಾ ಸಂಸ್ಥೆಗಳು ಈ ರೀತಿ ನಡೆದುಕೊಳ್ಳುತ್ತಿವೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ, ಅದು ದೊಡ್ಡ ನಾಯಕರಿಗೆ ಬಿಟ್ಟಿದ್ದು. ಆ ಸ್ಥಾನದ ಬಗ್ಗೆ ಮಾತನಾಡಲು ನಾನು ಇನ್ನು ಚಿಕ್ಕವನು. ಸಿದ್ದರಾಮಯ್ಯ ಅವರೆ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಮತ್ತು ಅಧ್ಯಕ್ಷರು ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಅವರ ಪರವಾಗಿದ್ದಾರೆ ಎಂದು ತಿಳಿಸಿದರು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…