ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಹಣಕಾಸಿನ ಕೊರತೆಯಿಂದ ರಾಜ್ಯ ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಹಗರಣಗಳು ನಡೆಯುತ್ತಲೇ ಇವೆ. ಇದನ್ನು ಖಂಡಿಸಿ ಇಂದಿನಿಂದ ಮೇ.3ರವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯ ಸರ್ಕಾರದಿಂದ ಮುಸ್ಲಿಂಮರ ತುಷ್ಟಿಕರಣವಾಗುತ್ತಿದೆ. ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿರುವುದರ ಬಗ್ಗೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ಧರ್ಮಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ರಾಜ್ಯದ ಸರ್ಕಾರಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ. ಹಣಕಾಸಿನ ಕೊರತೆಯಿಂದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಜನಸಾಮಾನ್ಯರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…