ಮೈಸೂರು ನಗರ

ಮೈಸೂರು| ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬೃಹತ್‌ ಪ್ರತಿಭಟನೆ

ಮೈಸೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ (CET Examination Center) ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು (Mysuru) ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕಟ್‌ ಮಾಡಿ ಬಿಸಾಕಿದ ಪ್ರಕರಣ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಖಂಡಿಸಿ ಬ್ರಾಹ್ಮಣ ವೇದಿಕೆ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಅಗ್ರಹಾರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ, ಪರೀಕ್ಷಾ ಸಿಬ್ಬಂದಿಗಳ ವಿರುದ್ಧ ಪ್ರತಿಭಟನಾಕಾರರು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನಮಗೆ ಜನಿವಾರ ಅತ್ಯಂತ ಮಹತ್ವ ಮೌಲ್ಯವಾದದ್ದು. ಈ ಮೂಲಕ ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದೇವೆ. ಜನಗಣತಿಯಲ್ಲಿ ಬ್ರಾಹ್ಮಣರನ್ನು ಕೇವಲ 16% ಇದ್ದಾರೆ ಎಂದು ತೋರಿಸಿದ್ದಾರೆ. ಜನಿವಾರದ ವಿಚಾರದಲ್ಲಿ ಸರ್ಕಾರ ಕ್ಷಮೆಯನ್ನು ಕೂಡ ಯಾಚಿಸಿಲ್ಲ. ಕೇವಲ ವಿಷಾದಿಸಿದೆ ಅಷ್ಟೇ. ಜನಿವಾರ ತೆಗೆಸಿ ಅಪಮಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಅಂಕ ನೀಡಿ ಸರ್ಕಾರಿ ಕಾಲೇಜಿನಲ್ಲಿ ಸೀಟ್ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಕೃಷ್ಣರಾಜ ಪೊಲೀಸ್‌ ಠಾಣೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಜನಿವಾರ ತೆಗೆಸಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago