ಮೈಸೂರು ನಗರ

ಮೈಸೂರು| ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬೃಹತ್‌ ಪ್ರತಿಭಟನೆ

ಮೈಸೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ (CET Examination Center) ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು (Mysuru) ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕಟ್‌ ಮಾಡಿ ಬಿಸಾಕಿದ ಪ್ರಕರಣ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಖಂಡಿಸಿ ಬ್ರಾಹ್ಮಣ ವೇದಿಕೆ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಅಗ್ರಹಾರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ, ಪರೀಕ್ಷಾ ಸಿಬ್ಬಂದಿಗಳ ವಿರುದ್ಧ ಪ್ರತಿಭಟನಾಕಾರರು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನಮಗೆ ಜನಿವಾರ ಅತ್ಯಂತ ಮಹತ್ವ ಮೌಲ್ಯವಾದದ್ದು. ಈ ಮೂಲಕ ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದೇವೆ. ಜನಗಣತಿಯಲ್ಲಿ ಬ್ರಾಹ್ಮಣರನ್ನು ಕೇವಲ 16% ಇದ್ದಾರೆ ಎಂದು ತೋರಿಸಿದ್ದಾರೆ. ಜನಿವಾರದ ವಿಚಾರದಲ್ಲಿ ಸರ್ಕಾರ ಕ್ಷಮೆಯನ್ನು ಕೂಡ ಯಾಚಿಸಿಲ್ಲ. ಕೇವಲ ವಿಷಾದಿಸಿದೆ ಅಷ್ಟೇ. ಜನಿವಾರ ತೆಗೆಸಿ ಅಪಮಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಅಂಕ ನೀಡಿ ಸರ್ಕಾರಿ ಕಾಲೇಜಿನಲ್ಲಿ ಸೀಟ್ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಕೃಷ್ಣರಾಜ ಪೊಲೀಸ್‌ ಠಾಣೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಜನಿವಾರ ತೆಗೆಸಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

8 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

8 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

9 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

9 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

9 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

10 hours ago