ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ಇ-ಖಾತೆಯಿಂದ ಜನರಿಗೆ ಭಾರೀ ತೊಂದರೆಯಾಗುತ್ತಿದೆ. ಈ ಬಗ್ಗೆ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿವೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಲಸ ಕಾರ್ಯಗಳ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.
ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 3260 ಮನೆಗಳು ಬರಲಿದ್ದು, ಎಷ್ಟು ಮನೆಗಳಿಗೆ ಖಾತೆ ಆಗಿದೆ ಎಂದು ಪ್ರಶ್ನೆ ಮಾಡಿದರು. ಪಟ್ಟಣ ಪಂಚಾಯಿತಿ ಆಗಿ ಐದು ವರ್ಷ ಕಳೆದರೂ ಇನ್ನೂ ಕೆಲಸಗಳು ಆಗಿಲ್ಲವೇ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…