ಮೈಸೂರು ನಗರ

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ದರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯ ನಡೆಯುತ್ತಿರುವುದರಿಂದ ತೀವ್ರ ಬೇಸರದಿಂದ ಇದನ್ನು ಬರೆಯುತ್ತಿದ್ದೇನೆ. ಈ ವರ್ಷದ ನಾಡಹಬ್ಬ ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎನ್ನುವಂತಹ ಅಸಂವೇದನಾಶೀಲ ಹೇಳಿಕೆಗಳು ಅನಗತ್ಯ ಮತ್ತು ತಪ್ಪಿಸಬಹುದಾದವು. ಅದು ಹಿಂದೂ ದೇವಸ್ಥಾನವಲ್ಲದಿದ್ದರೆ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯವು ಸ್ವಭಾವತಃ ಇಂತಹ ಉತ್ಸವ ನಡೆಸುವಲ್ಲಿ ಧಾರ್ಮಿಕ ಪವಿತ್ರ ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಆಯೋಜಿಸುವ ಆಚರಣೆಗಳು ಧಾರ್ಮಿಕ ಸ್ವರೂಪ ಆಗಿಲ್ಲ. ಅವು ವಿಜಯದಶಮಿ ಸೇರಿ ನವರಾತ್ರಿ ಆಚರಣೆಗಳೊಂದಿಗೆ ಹೊಂದಿಕೆಯಾಗುತ್ತವೆ. ಈ ಧಾರ್ಮಿಕ ಆಚರಣೆಗಳನ್ನು ಖಾಸಗಿಯಾಗಿ ಹಳೆಯ ಧಾರ್ಮಿಕ ಪದ್ಧತಿ ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ನಾವು ಆಚರಿಸುತ್ತೇವೆ. ಸರ್ಕಾರ ಕೂಡ ಸಾಂಸ್ಕೃತಿಕ ಆಚರಣೆಗಳನ್ನು ಅರಮನೆಯ ಮುಂದೆ ಆಚರಿಸುತ್ತದೆ. ಎರಡೂ ಆಚರಣೆಯಿಂದ ಗೊಂದಲ ಆಗದಿರಲಿ ಎಂದು ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

10 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

10 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

10 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

10 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

10 hours ago