ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ.ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ನಾಡದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲಾ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲಾ ಮಕ್ಕಳ ಾಸ್ತಿ. ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದು ಕಿಡಿಕಾರಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಎಲ್ಲಾ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರು ಮಾಡುವವಳು ನಮ್ಮ ದುರ್ಗಾದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ಮೈಸೂರು ದಸರಾ ಎಲ್ಲಾ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ. ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…