ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ.ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ನಾಡದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲಾ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲಾ ಮಕ್ಕಳ ಾಸ್ತಿ. ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದು ಕಿಡಿಕಾರಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಎಲ್ಲಾ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರು ಮಾಡುವವಳು ನಮ್ಮ ದುರ್ಗಾದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ಮೈಸೂರು ದಸರಾ ಎಲ್ಲಾ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ. ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…