ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಿನ್ನೆ ಜೇನುಗೂಡು ಸೇವಾ ಸಮಿತಿ ವತಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.
ಮೈಸೂರಿನ ವಿಜಯನಗರದ 4ನೇ ಹಂತದಲ್ಲಿ ಆಯೋಜಿಸಿದ್ದ 16ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ಮುಖಂಡ ಎಸ್.ಬಿ.ಮಂಜು, ಕಾಂಗ್ರೆಸ್ ಹಿರಿಯ ಮಹಿಳಾ ಮುಖಂಡೆ ಮಾಲ ಮಹೇಂದ್ರ, ಜೇನುಗೂಡು ಸೇವಾ ಸಮಿತಿಯ ಸಂಸ್ಥಾಪಕಿ ರಾಧಾ ಸಂದೀಲ್ ಅವರು ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಅಲ್ಲಿ ನೆರೆದಿದ್ದ ನೂರಾರು ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು. ಅಲ್ಲಿಗೆ ಬಂದಿದ್ದ ಸಾರ್ವಜನಿಕರು ಚಾಮುಂಡೇಶ್ವರಿ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಭವ್ಯ ಮುತ್ತುರಾಜ್, ನತೀಶ್ ಗೌಡ, ನವೀಶ್ ಗೌಡ, ಹೃತ್ವಿಕ್ ಗೌಡ, ಯಾತ್ರೇಶ್ ಗೌಡ, ರತನ್ ಗೌಡ, ನಾಗೇಶ್ ಗೌಡ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…