ಮೈಸೂರು ನಗರ

ಮೈಸೂರಿನೆಲ್ಲೆಡೆ ಚಾಮುಂಡಿ ಹಬ್ಬದ ಸಂಭ್ರಮ: ಬೆಟ್ಟದ ತಪ್ಪಲಿನಲ್ಲಿ ಪ್ರಸಾದ ವಿತರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಚಾಮುಂಡಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಚಾಮುಂಡಿ ಹಬ್ಬದ ಪ್ರಯುಕ್ತ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಕ್ತರು ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು. ಭಕ್ತರಿಗಾಗಿಯೇ ವೆಜ್ ಹಾಗೂ ನಾನ್ ವೆಜ್ ಊಟ ನೀಡಲಾಗುತ್ತಿದ್ದು, ಬೆಟ್ಟದ ಪಾದದ ಬಳಿ ಕುರಿ ಕೋಳಿ ಕಡಿದು ಹಬ್ಬ ಆಚರಣೆ ಮಾಡಲಾಗುತ್ತಿದೆ.

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದಿಂದಲೂ ಚಾಮುಂಡಿ ದೇವಿಯ ಹಬ್ಬ ಆಚರಣೆ ಮಾಡಲಾಗಿದ್ದು, ಬೆಟ್ಟದ ಪಾದದ ಬಲಿ ಸುಮಾರು 15 ಸಾವಿರ ಜನರಿಗೆ ನಾನ್ ವೆಜ್ ಊಟ ವಿತರಣೆ ಮಾಡಲಾಗಿದೆ.

ದಿನವಿಡೀ ವಿದ್ಯುತ್ ಕಂಬಗಳಲ್ಲಿ ಕೆಲಸ ಮಾಡುವ ನಮಗೆ ತಾಯಿ ಚಾಮುಂಡೇಶ್ವರಿ ಸದಾ ಕಾವಲಾಗಿರಲಿ ಹಾಗೂ ಯಾವಾಗಲು ನಮ್ಮ ಮೇಲೆ ದೇವಿಯ ಆಶೀರ್ವಾದ ಇರಲಿ ಎಂದು ಪ್ರತಿ ವರ್ಷ ಪೂಜೆ ಮಾಡುತ್ತಿದ್ದೇವೆ. ಬರುವ ಭಕ್ತರಿಗೆ ವೆಜ್ ಹಾಗೂ ನಾನ್ ವೆಜ್ ಊಟ ನೀಡುತ್ತಿದ್ದೇವೆ ಎಂದು ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

16 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

16 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

21 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago