ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದರು.
ಪರಿಶೀಲನೆ ಬಳಿಕ ದಾಸೋಹ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಚಾಮುಂಡಿ ಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ದಾಸೋಹ ಭವನಕ್ಕೆ ಶೂ ಧರಿಸಿಯೇ ಬಂದಿದ್ದರು.
ದಾಸೋಹ ಭವನಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಕಮಿಷನರ್ ಸೀಮಾ ಲಾಟ್ಕರ್ ಮತ್ತು ಅಧಿಕಾರಿಗಳೆಲ್ಲರು ಶೂ ತೆಗೆದು ಬಂದಿದ್ದರು. ಆದ್ರೆ ರೂಪ ಅವರು ಮಾತ್ರ ಶೂ ಹಾಕಿಕೊಂಡು ದಾಸೋಹ ಭವನದ ಒಳಗೆ ಬಂದು ಅಧಿಕಾರಿಗಳ ಪಕ್ಕದಲ್ಲೇ ಕುಳಿತಿದ್ದರು.
ಈ ಮೂಲಕ ದಾಸೋಹ ಭವನದಲ್ಲಿ ಪಾಲಿಸಬೇಕಾದ ನಿಯಮವನ್ನು ರೂಪ ಗಾಳಿಗೆ ತೂರಿದ್ದು, ಪತ್ರಕರ್ತರ ಪ್ರಶ್ನೆಗೆ ಮೌನವಾಗಿ ಕುಳಿತಿದ್ದರು. ಪತ್ರಿಕಾಗೋಷ್ಠಿಗೆ ಸರಿಯಾದ ವ್ಯವಸ್ಥೆ ಮಾಡದ ಕಾರ್ಯದರ್ಶಿ ರೂಪ ಜೊತೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಕೆಲಕಾಲ ಚರ್ಚೆ ಮಾಡಿದರು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…