ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾನು ಸಿದ್ದರಾಮಯ್ಯರನ್ನು ಕೆಲವು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ಹಾಗೂ ನ್ಯೂನ್ಯತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆಯಿದೆ.
ಚಾಮುಂಡಿಬೆಟ್ಟಕ್ಕೆ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಬೇಕೇ ಬೇಕು. ಹಾಗಾಗಿ ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕು. ಸಿದ್ದರಾಮಯ್ಯ ಅವರು ಪ್ರಾಧಿಕಾರ ರಚನೆ ಮಾಡಿರೋದು ಒಂದು ಒಳ್ಳೆಯ ಕೆಲಸ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿಬೆಟ್ಟಕ್ಕೆ ತಲುಪದಿರಲು ಯಾರು ಕಾರಣ ಎಂದು ಪ್ರಶ್ನಿಸಿದ ಅವರು, ನಾನು ಏನೇ ಮಾತಾಡಿದ್ರೂ ಕಾಂಟ್ರವರ್ಸಿ ಆಗುತ್ತೆ. ಪೈಪ್ ಲೈನ್ ಎಲ್ಲಿ ತಡೆದು ನಿಂತಿದೆ ನೀವೇ ಹೋಗಿ ಹುಡುಕಿ ಎನ್ನುವ ಮೂಲಕ ಹೆಸರು ಹೇಳದೇ ಸಂಸದ ಯದುವೀರ್ ಒಡೆಯರ್ಗೆ ಟಾಂಗ್ ಕೊಟ್ಟಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…