ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಚಾಮುಂಡಿಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾನು ಸಿದ್ದರಾಮಯ್ಯರನ್ನು ಕೆಲವು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ಹಾಗೂ ನ್ಯೂನ್ಯತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆಯಿದೆ.
ಚಾಮುಂಡಿಬೆಟ್ಟಕ್ಕೆ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಬೇಕೇ ಬೇಕು. ಹಾಗಾಗಿ ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕು. ಸಿದ್ದರಾಮಯ್ಯ ಅವರು ಪ್ರಾಧಿಕಾರ ರಚನೆ ಮಾಡಿರೋದು ಒಂದು ಒಳ್ಳೆಯ ಕೆಲಸ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿಬೆಟ್ಟಕ್ಕೆ ತಲುಪದಿರಲು ಯಾರು ಕಾರಣ ಎಂದು ಪ್ರಶ್ನಿಸಿದ ಅವರು, ನಾನು ಏನೇ ಮಾತಾಡಿದ್ರೂ ಕಾಂಟ್ರವರ್ಸಿ ಆಗುತ್ತೆ. ಪೈಪ್ ಲೈನ್ ಎಲ್ಲಿ ತಡೆದು ನಿಂತಿದೆ ನೀವೇ ಹೋಗಿ ಹುಡುಕಿ ಎನ್ನುವ ಮೂಲಕ ಹೆಸರು ಹೇಳದೇ ಸಂಸದ ಯದುವೀರ್ ಒಡೆಯರ್ಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…