ಮೈಸೂರು ನಗರ

ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗೀತು ಎಂದ ಸಚಿವ ಎಚ್‌ಸಿಎಂ

ಮೈಸೂರು: ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಹೇಳಿದ ಮೇಲೆ ಮುಗೀತು. ಮತ್ತೆ ಇನ್ನೇನು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಡಿಕೆ.ಶಿವಕುಮಾರ್‌‌ಗೆ ಶಾಸಕರ ಬೆಂಬಲ ಇಲ್ಲ.
ಹಾಗಾಗಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ ಮೇಲೆ ಮುಗಿತಲ್ಲ ಬಿಡಿ ಎಂದು ಸಿದ್ದು ಪರ ಬ್ಯಾಟ್‌ ಮಾಡಿದರು. ಇನ್ನು ಸಂಕ್ರಾಂತಿಯಂತೂ ನಡೆದೇ ನಡೆಯುತ್ತದೆ. ಸಿಎಂ, ಸುರ್ಜೇವಾಲ ಸ್ಪಷ್ಟಪಡಿಸಿದ ಮೇಲೆ ಯಾಕೆ ಮತ್ತೆ ಮತ್ತೆ ಪ್ರಶ್ನೆ ಕೇಳ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.

ಇನ್ನು ಡಿಕೆಶಿ ಪಕ್ಷ ಕಟ್ಟಿದ್ದಾರೆ, ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷ ಕಟ್ಟಿದ್ರು ಅಂದ್ರೆ, ಎಲ್ಲರು ಸೇರಿದ್ರೆ ಅಲ್ವ ಅಣೆಕಟ್ಟು ಕಟ್ಟೋದು. ಅಣೆಕಟ್ಟನ್ನು ಕಲ್ಲು, ಮಣ್ಣು, ಜೆಲ್ಲಿ ಎಲ್ಲ ಸೇರಿಸಿ ಕಟ್ಟುತ್ತೇವೆ. ಹನಿ ಹನಿ ಗೂಡಿದ್ರೆ ಹಳ್ಳ ಎಂಬಂತೆ ಎಲ್ಲ ಸೇರಿ ಕಟ್ಟಿದ್ದಾರೆ. ಅದರಲ್ಲಿ ಡಿಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನ ನಾವು ಇಲ್ಲ ಅನ್ನೋಕಾಗುತ್ತ? ಎಂದು ಪ್ರಶ್ನಿಸಿದ ಅವರು, ಖರ್ಗೆ, ಪರಮೇಶ್ವರ್, ದಿನೇಶ್‌ ಗುಂಡೂರಾವ್, ಆರ್.ವಿ.ದೇಶಪಾಂಡೆ ಪಾತ್ರ ಇಲ್ವ. ಯಾರ್ ಯಾರಿಗೆ ಪಕ್ಷ ಜವಾಬ್ದಾರಿ ಕೊಟ್ಟಿದೆ ಆಗ ಎಲ್ಲರೂ ಕೆಲಸ ಮಾಡಿದ್ದಾರೆ. ಪ್ರಸ್ತಾಪಗಳು ಬೇಜಾನು ಬರುತ್ತವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಸಿಎಂ 5 ವರ್ಷ ನಾನೇ ಇರುತ್ತೇನೆ ಎಂದು ಹೇಳಿರುವಾಗ ಯಾವುದೇ ಪ್ರಶ್ನೆ ಇಲ್ಲ ಎಂದು ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಂವಿಧಾನ ರಕ್ಷಿಸಿದ್ರೆ, ದೇಶ ಸುಭದ್ರ : ಸಿಎಂ

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…

25 mins ago

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

1 hour ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

3 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

3 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

3 hours ago