Change of CM siddaramaiah
ಮೈಸೂರು: ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಹೇಳಿದ ಮೇಲೆ ಮುಗೀತು. ಮತ್ತೆ ಇನ್ನೇನು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಡಿಕೆ.ಶಿವಕುಮಾರ್ಗೆ ಶಾಸಕರ ಬೆಂಬಲ ಇಲ್ಲ.
ಹಾಗಾಗಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ ಮೇಲೆ ಮುಗಿತಲ್ಲ ಬಿಡಿ ಎಂದು ಸಿದ್ದು ಪರ ಬ್ಯಾಟ್ ಮಾಡಿದರು. ಇನ್ನು ಸಂಕ್ರಾಂತಿಯಂತೂ ನಡೆದೇ ನಡೆಯುತ್ತದೆ. ಸಿಎಂ, ಸುರ್ಜೇವಾಲ ಸ್ಪಷ್ಟಪಡಿಸಿದ ಮೇಲೆ ಯಾಕೆ ಮತ್ತೆ ಮತ್ತೆ ಪ್ರಶ್ನೆ ಕೇಳ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.
ಇನ್ನು ಡಿಕೆಶಿ ಪಕ್ಷ ಕಟ್ಟಿದ್ದಾರೆ, ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷ ಕಟ್ಟಿದ್ರು ಅಂದ್ರೆ, ಎಲ್ಲರು ಸೇರಿದ್ರೆ ಅಲ್ವ ಅಣೆಕಟ್ಟು ಕಟ್ಟೋದು. ಅಣೆಕಟ್ಟನ್ನು ಕಲ್ಲು, ಮಣ್ಣು, ಜೆಲ್ಲಿ ಎಲ್ಲ ಸೇರಿಸಿ ಕಟ್ಟುತ್ತೇವೆ. ಹನಿ ಹನಿ ಗೂಡಿದ್ರೆ ಹಳ್ಳ ಎಂಬಂತೆ ಎಲ್ಲ ಸೇರಿ ಕಟ್ಟಿದ್ದಾರೆ. ಅದರಲ್ಲಿ ಡಿಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನ ನಾವು ಇಲ್ಲ ಅನ್ನೋಕಾಗುತ್ತ? ಎಂದು ಪ್ರಶ್ನಿಸಿದ ಅವರು, ಖರ್ಗೆ, ಪರಮೇಶ್ವರ್, ದಿನೇಶ್ ಗುಂಡೂರಾವ್, ಆರ್.ವಿ.ದೇಶಪಾಂಡೆ ಪಾತ್ರ ಇಲ್ವ. ಯಾರ್ ಯಾರಿಗೆ ಪಕ್ಷ ಜವಾಬ್ದಾರಿ ಕೊಟ್ಟಿದೆ ಆಗ ಎಲ್ಲರೂ ಕೆಲಸ ಮಾಡಿದ್ದಾರೆ. ಪ್ರಸ್ತಾಪಗಳು ಬೇಜಾನು ಬರುತ್ತವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಸಿಎಂ 5 ವರ್ಷ ನಾನೇ ಇರುತ್ತೇನೆ ಎಂದು ಹೇಳಿರುವಾಗ ಯಾವುದೇ ಪ್ರಶ್ನೆ ಇಲ್ಲ ಎಂದು ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…