ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ ಮೂಡಿಸಿದೆ. ಈಗಾಗಲೇ ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನೇ ಅಭ್ಯರ್ಥಿ ನಾನೇ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಅಭ್ಯರ್ಥಿ ಯಾರೆಂದು ಇನ್ನು ನಾಲ್ಕೈದು ದಿನಗಳಲ್ಲಿ ಘೋಷಣೆ ಆಗಲಿದೆ ಎಂದರು.
ಇನ್ನು ಮರೀಗೌಡ ರಾಜೀನಾಮೆ ವಿಚಾರ ಕುರಿತು ಮಾತನಾಡಿದ ಅವರು, ಮರೀಗೌಡ ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ತನಿಖೆಗೆ ಒಳ್ಳೆಯದೇ ಆಗಿದೆ. ಪಾರದರ್ಶಕ ತನಿಖೆ ಆಗಲಿ ಎಂದು ರಾಜೀನಾಮೆ ಕೊಟ್ಟಿದ್ದಾರೆ. ಇದರಿಂದ ಮುಡಾದಿಂದ ಸಿಎಂಗೆ ಅಂಟಿರುವ ಕಳಂಕ ದೂರ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…