ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ಬೆನ್ನಲ್ಲೇ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್ಸಿ ಎಚ್.ವಿಶ್ವನಾಥ್ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗುವುದು ಗ್ಯಾರಂಟಿ. ಏಕೆಂದರೆ ಈಗಾಗಲೇ ಕಾಂಗ್ರೆಸ್ ಮೇಲೆ ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕಾರ್ಮೋಡ ಕವಿದಿದೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ಗೆ ಗೆಲುವಿನ ವಾತಾವರಣವಿದೆ. ಅಲ್ಲದೇ, ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದು, ಮೆಗಾಸಿಟಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ. ಈ ವಂಚನೆಗೊಳಗಾಗಿದವರಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕಾರಣಕ್ಕೆ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…