ಮೈಸೂರು: ನಿನ್ನೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರ ಮಂಡ್ಯ ಹೇಳಿಕೆಗೆ ಮಾತ್ರ ನಮ್ಮ ವಿರೋಧ ಇತ್ತು. ನಿನ್ನೆ ದಸರಾ ಉದ್ಘಾಟನೆಯಲ್ಲಿ ಯಾವ ರೀತಿ ನೆಡೆದುಕೊಳ್ಳುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ. ಬಾನು ಮುಷ್ತಾಕ್ ಅವರನ್ನು ವೈಯಕ್ತಿಕವಾಗಿ ಅಥವಾ ಅವರ ಧರ್ಮವನ್ನು ವಿರೋಧ ಮಾಡಿಲ್ಲ. ಅವರ ಮಂಡ್ಯ ಹೇಳಿಕೆಗೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆವು. ನಿನ್ನೆ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: Mysuru Dasara | ದೀಪಾಲಂಕಾರ ಕಣ್ತುಂಬಿಕೊಂಡ ಜನಸಾಗರ
ಇನ್ನು ನಿನ್ನೆಯ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಗುರಿಯಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 10 ದಿನಗಳ ನಾಡಹಬ್ಬದಲ್ಲಿ ರಾಜಕೀಯ ಹೊರತುಪಡಿಸಿ ದಸರಾ ಮಾಡಲಿ ಎನ್ನುವುದು ನನ್ನ ಆಶಯ. ಇದರ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡುವುದಿಲ್ಲ.
ದಸರಾ ಮುಗಿದ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…