ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ ದೂರು ದಾಖಲಾಗಿದೆ. ಶಾಲೆ ಕಾರ್ಯದರ್ಶಿ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದವರು.
ಇದನ್ನು ಓದಿ: ಶಾಮನೂರು | ಓದಿದ್ದೂ 10ನೇ ತರಗತಿ ; ಕಟ್ಟಿದ್ದೂ ಬೃಹತ್ ಶಿಕ್ಷಣ ಸಾಮ್ರಾಜ್ಯ…..!
ಅನ್ಸರ್ ಪಾಷಾ ಅವರು 2023 ರಲ್ಲಿ ದೊಡ್ಡಮ್ಮ ಸುಲ್ತಾನಾ ಅವರಿಗೆ 3 ಲಕ್ಷ ಸಾಲ ನೀಡಿದ್ದರು. ಸಾಲ ಮರುಪಾವತಿಸಲು 2.40 ಲಕ್ಷಕ್ಕೆ ಚೆಕ್ ನೀಡಿದ್ದರು. ಚೆಕ್ ನಗದೀಕರಿಸಲು ಅನ್ಸರ್ ಪಾಷಾ ಬ್ಯಾಂಕ್ ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಹಣ ವಸೂಲಿಗಾಗಿ ಅನ್ಸರ್ ಪಾಷಾ ನೋಟಿಸ್ ನೀಡಿದ್ದಾರೆ. ಈ ವೇಳೆ ಶಾಲೆಗೆ ಬಂದ ಸಂಬಂಧಿಕರಾದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಮರ್ಡರ್ ಮಾಡಿಸುವುದಾಗಿ ಬೆದರಿಕೆ ಹಾಕಿ ಅನ್ಸರ್ ಪಾಷಾ ಜೊತೆ ಅನುಚಿತವಾಗಿ ನಡೆದುಕೊಂಡು ಶಾಲೆಯಿಂದ ಹೊರಗೆ ತಳ್ಳಿ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ್ದಾರೆ. ಇಬ್ಬರ ವಿರುದ್ದ ಕಾನೂನ ಕ್ರಮ ಕೈಗೊಳ್ಳುವಂತೆ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…