ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ ದೂರು ದಾಖಲಾಗಿದೆ. ಶಾಲೆ ಕಾರ್ಯದರ್ಶಿ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದವರು.
ಇದನ್ನು ಓದಿ: ಶಾಮನೂರು | ಓದಿದ್ದೂ 10ನೇ ತರಗತಿ ; ಕಟ್ಟಿದ್ದೂ ಬೃಹತ್ ಶಿಕ್ಷಣ ಸಾಮ್ರಾಜ್ಯ…..!
ಅನ್ಸರ್ ಪಾಷಾ ಅವರು 2023 ರಲ್ಲಿ ದೊಡ್ಡಮ್ಮ ಸುಲ್ತಾನಾ ಅವರಿಗೆ 3 ಲಕ್ಷ ಸಾಲ ನೀಡಿದ್ದರು. ಸಾಲ ಮರುಪಾವತಿಸಲು 2.40 ಲಕ್ಷಕ್ಕೆ ಚೆಕ್ ನೀಡಿದ್ದರು. ಚೆಕ್ ನಗದೀಕರಿಸಲು ಅನ್ಸರ್ ಪಾಷಾ ಬ್ಯಾಂಕ್ ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಹಣ ವಸೂಲಿಗಾಗಿ ಅನ್ಸರ್ ಪಾಷಾ ನೋಟಿಸ್ ನೀಡಿದ್ದಾರೆ. ಈ ವೇಳೆ ಶಾಲೆಗೆ ಬಂದ ಸಂಬಂಧಿಕರಾದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಮರ್ಡರ್ ಮಾಡಿಸುವುದಾಗಿ ಬೆದರಿಕೆ ಹಾಕಿ ಅನ್ಸರ್ ಪಾಷಾ ಜೊತೆ ಅನುಚಿತವಾಗಿ ನಡೆದುಕೊಂಡು ಶಾಲೆಯಿಂದ ಹೊರಗೆ ತಳ್ಳಿ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ್ದಾರೆ. ಇಬ್ಬರ ವಿರುದ್ದ ಕಾನೂನ ಕ್ರಮ ಕೈಗೊಳ್ಳುವಂತೆ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…