ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ ದೂರು ದಾಖಲಾಗಿದೆ. ಶಾಲೆ ಕಾರ್ಯದರ್ಶಿ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದವರು.
ಇದನ್ನು ಓದಿ: ಶಾಮನೂರು | ಓದಿದ್ದೂ 10ನೇ ತರಗತಿ ; ಕಟ್ಟಿದ್ದೂ ಬೃಹತ್ ಶಿಕ್ಷಣ ಸಾಮ್ರಾಜ್ಯ…..!
ಅನ್ಸರ್ ಪಾಷಾ ಅವರು 2023 ರಲ್ಲಿ ದೊಡ್ಡಮ್ಮ ಸುಲ್ತಾನಾ ಅವರಿಗೆ 3 ಲಕ್ಷ ಸಾಲ ನೀಡಿದ್ದರು. ಸಾಲ ಮರುಪಾವತಿಸಲು 2.40 ಲಕ್ಷಕ್ಕೆ ಚೆಕ್ ನೀಡಿದ್ದರು. ಚೆಕ್ ನಗದೀಕರಿಸಲು ಅನ್ಸರ್ ಪಾಷಾ ಬ್ಯಾಂಕ್ ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಹಣ ವಸೂಲಿಗಾಗಿ ಅನ್ಸರ್ ಪಾಷಾ ನೋಟಿಸ್ ನೀಡಿದ್ದಾರೆ. ಈ ವೇಳೆ ಶಾಲೆಗೆ ಬಂದ ಸಂಬಂಧಿಕರಾದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಮರ್ಡರ್ ಮಾಡಿಸುವುದಾಗಿ ಬೆದರಿಕೆ ಹಾಕಿ ಅನ್ಸರ್ ಪಾಷಾ ಜೊತೆ ಅನುಚಿತವಾಗಿ ನಡೆದುಕೊಂಡು ಶಾಲೆಯಿಂದ ಹೊರಗೆ ತಳ್ಳಿ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ್ದಾರೆ. ಇಬ್ಬರ ವಿರುದ್ದ ಕಾನೂನ ಕ್ರಮ ಕೈಗೊಳ್ಳುವಂತೆ ಅನ್ಸರ್ ಪಾಷಾ ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…