ಮೈಸೂರು ನಗರ

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಎನ್‌ಐಸಿಯುನಲ್ಲಿ ನವಜಾತ ಶಿಶುವಿಗೆ ಇರುವೆ ಕಚ್ಚಿ ಮೃತಪಟ್ಟ ವಿಚಾರ ದೊಡ್ಡ ಸದ್ದು ಮಾಡಿರುವ ಜೊತೆಗೆ, ಕಳೆದ 15 ತಿಂಗಳ ಅವಧಿಯಲ್ಲಿ 421 ಶಿಶುಗಳು, 12 ತಾಯಂದಿರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ನವಜಾತ ಶಿಶುಗಳ ಮರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನಿರಂತರವಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲೇ ಮಾಜಿ ಶಾಸಕ ಎಲ್.ನಾಗೇಂದ್ರ ಹೊರ ಹಾಕಿರುವ ದಾಖಲೆ ಪೋಷಕರಲ್ಲಿ ದೊಡ್ಡ ಆತಂಕ ಮೂಡಿಸಿದೆ.

ತಾಯಿ ಮತ್ತು ಮಗುವಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು, ಹೆರಿಗೆ ಸಂದರ್ಭ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತಗ್ಗಿಸುವ ಸಲುವಾಗಿ 1880 ರಲ್ಲಿ ಮೈಸೂರು ಅರಸರು ನಿರ್ಮಾಣ ಮಾಡಿದ ಚೆಲುವಾಂಬ ಆಸ್ಪತ್ರೆ ಸುತ್ತಲಿನ ಐದಾರು ಜಿಲ್ಲೆಗಳ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. ಈ ನಡುವೆ ವೈದ್ಯಕೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆ, ಹೊರ ಜಿಲ್ಲೆ ರೋಗಿಗಳ ಒತ್ತಡ ಸೇರಿದಂತೆ ಹತ್ತಾರು ಕಾರಣಗಳಿಂದ 2025ರ ಜನವರಿಯಿಂದ ಈವರೆಗೆ ಆಸ್ಪತ್ರೆಯಲ್ಲಿ 421 ನವಜಾತ ಶಿಶುಗಳು ಅಸುನೀಗಿದ್ದು, 12 ತಾಯಂದಿರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದ್ದು, ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.

ಇಡೀ ರಾಜ್ಯಕ್ಕೆ ಹೋಲಿಕೆ ಮಾಡಿದರೆ ಮೈಸೂರು ಜಿಲ್ಲೆ ಶಿಶು ಮರಣ ಪ್ರಮಾಣದಲ್ಲಿ ಕಡಿಮೆ ಇದೆ. ಆದರೂ ಆಸ್ಪತ್ರೆಯ ಎಸ್‌ಎನ್‌ಸಿಯು(ಸಿಕ್ ನ್ಯೂಬಾರ್ನ್ ಕೇರ್ ಯುನಿಟ್)ಗೆ ದಾಖಲಾದ 3,486 ಶಿಶುಗಳ ಪೈಕಿ 421 ಶಿಶುಗಳು ಮರಣಹೊಂದಿವೆ. ಈ ಪ್ರಮಾಣದಲ್ಲಿ ಶಿಶುಗಳ ಮರಣ ನಿರಂತರವಾಗಿ ಸಂಭವಿಸುತ್ತಿದ್ದರೂ ಅದನ್ನು ತಡೆಯುವಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ ವಿಫಲವಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago