ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ವೈದ್ಯರು, ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ. ಮಗು ಅವಧಿ ಪೂರ್ವ ಜನನವಾಗಿತ್ತು. ಹುಟ್ಟಿದಾಗ 1 ಕೆಜಿ 40 ಗ್ರಾಂ ಇದ್ದಕ್ಕಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಮಗುವಿನ ಮುಖಕ್ಕೆ ಐಸಿಯುನಲ್ಲಿ ಆಕ್ಸಿಜನ್ ಮಾಸ್ಕ್ ಹಾಕಲಾಗಿತ್ತು. ಆ ಪಟ್ಟಿಯಿಂದ ಮುಖದ ಮೇಲೆ ಗಾಯಗಳಾಗಿದೆ. ಹಾರ್ಟ್ ಬೀಟ್ ಕಡಿಮೆ ಆದಮೇಲೆ ಎದೆಯನ್ನು ಒತ್ತಲಾಗಿತ್ತು. ಅದರ ಮಾರ್ಕ್ಗಳು ಎದೆಯ ಮೇಲಿದೆ. ಗ್ಲೂಕೋಸ್ ಬಳಿ ಒಂದೇ ಒಂದು ಇರುವೆ ಇತ್ತು. ಅದನ್ನ ನೋಡಿದ ಪೋಷಕರು ಇರುವೆಯಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಆದರೆ ಇರುವೆ ಕಚ್ಚಿವೆ, ಮಗು ಸಾವಾಗಿದೆ ಎನ್ನುವುದು ಸುಳ್ಳು. ಅವಧಿ ಪೂರ್ವ ಜನನದ ಮಕ್ಕಳು ಬದುಕುಳಿಯುವುದು ತುಂಬಾ ಕಷ್ಟ. ಈಗಲೂ ಆಸ್ಪತ್ರೆಯಲ್ಲಿ 40 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿವೆ. ಪೋಷಕರ ಆರೋಪ ಸತ್ಯಕ್ಕೆ ದೂರವಾದದ್ದು. ಪೋಷಕರು ಮಗು ಸಾವಿನ ದುಃಖದಲ್ಲಿದ್ದಾರೆ. ಈಗಾಗಿ ಆಸ್ಪತ್ರೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪೋಷಕರ ಆರೋಪವನ್ನು ತಿರಸ್ಕರಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…