ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ವೈದ್ಯರು, ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ. ಮಗು ಅವಧಿ ಪೂರ್ವ ಜನನವಾಗಿತ್ತು. ಹುಟ್ಟಿದಾಗ 1 ಕೆಜಿ 40 ಗ್ರಾಂ ಇದ್ದಕ್ಕಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಮಗುವಿನ ಮುಖಕ್ಕೆ ಐಸಿಯುನಲ್ಲಿ ಆಕ್ಸಿಜನ್ ಮಾಸ್ಕ್ ಹಾಕಲಾಗಿತ್ತು. ಆ ಪಟ್ಟಿಯಿಂದ ಮುಖದ ಮೇಲೆ ಗಾಯಗಳಾಗಿದೆ. ಹಾರ್ಟ್ ಬೀಟ್ ಕಡಿಮೆ ಆದಮೇಲೆ ಎದೆಯನ್ನು ಒತ್ತಲಾಗಿತ್ತು. ಅದರ ಮಾರ್ಕ್ಗಳು ಎದೆಯ ಮೇಲಿದೆ. ಗ್ಲೂಕೋಸ್ ಬಳಿ ಒಂದೇ ಒಂದು ಇರುವೆ ಇತ್ತು. ಅದನ್ನ ನೋಡಿದ ಪೋಷಕರು ಇರುವೆಯಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಆದರೆ ಇರುವೆ ಕಚ್ಚಿವೆ, ಮಗು ಸಾವಾಗಿದೆ ಎನ್ನುವುದು ಸುಳ್ಳು. ಅವಧಿ ಪೂರ್ವ ಜನನದ ಮಕ್ಕಳು ಬದುಕುಳಿಯುವುದು ತುಂಬಾ ಕಷ್ಟ. ಈಗಲೂ ಆಸ್ಪತ್ರೆಯಲ್ಲಿ 40 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿವೆ. ಪೋಷಕರ ಆರೋಪ ಸತ್ಯಕ್ಕೆ ದೂರವಾದದ್ದು. ಪೋಷಕರು ಮಗು ಸಾವಿನ ದುಃಖದಲ್ಲಿದ್ದಾರೆ. ಈಗಾಗಿ ಆಸ್ಪತ್ರೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪೋಷಕರ ಆರೋಪವನ್ನು ತಿರಸ್ಕರಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…